ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬಿಜೆಪಿ ಹಲವು ಮೂಲಭೂತ ಪ್ರಶ್ನೆಗಳನ್ನು ಎತ್ತಿದೆ.
ಮೇಕೆದಾಟು ಪಾದಯಾತ್ರೆ ಹೆಸರಿನಲ್ಲಿ ಸುಳ್ಳಿನ ಮೆರವಣಿಗೆ ನಡೆಸುತ್ತಿರುವ ಕಾಂಗ್ರೆಸ್ಸಿಗರೇ, ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿದ್ದು ಯಾರು? ಎಂದು ಕ ಟ್ವೀಟ್ ಮಾಡಿ ಬಿಜೆಪಿ ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿ ಮಾಡಿದ್ದು ನನ್ನ ಸರ್ಕಾರ ಎಂದು ಹೇಳಿದ್ದೀರಿ. ಡಿಪಿಆರ್ ತಯಾರಾಗಿದ್ದು ನಮ್ಮ ಕಾಲದಲ್ಲಿ ಎಂದು ಕುಮಾರಸ್ವಾಮಿ ಅವರು ಹೇಳುತ್ತಿದ್ದಾರೆ.
ಹಾಗಾದರೆ ಸತ್ಯ ಯಾವುದು ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ಸಿಗರು ಪಾದಯಾತ್ರೆಯ ಜೊತೆ ಸುಳ್ಳಿನಜಾತ್ರೆ ಮಾಡುತ್ತಿದ್ದಾರೆ. ಅದರ ಸರ್ಕಾರ ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಗೆ ಒಂದು ದಿಕ್ಕು ತೋರಿಸಲಿಲ್ಲ.
ಆಗ ಅವರ ಸಂಪೂರ್ಣ ಗಮನ ಹಿಂದೂ ಕಾರ್ಯಕರ್ತರ ದಮನ, ಟಿಪ್ಪು ಸುಲ್ತಾನ ವೈಭವೀಕರಣದ ಮೇಲಿತ್ತು ಎಂದು ದೂರಿದೆ.
ಮೇಕೆದಾಟು ಯೋಜನೆಯ ವಿಳಂಬಕ್ಕೆ ನಿಜವಾದ ಕಾರಣೀಕರ್ತರೆಂದರೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಎಂದು ಟ್ವಿಟರ್ ನಲ್ಲಿ ಬಿಜೆಪಿ ಆರೋಪಿಸಿದೆ.

