ಕಡ್ಡಾಯವಾಗಿ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲು ಸಿಎಂ ಮನವಿ

ಬೆಂಗಳೂರು:ರಾಜ್ಯಾದ್ಯಂತ  ಪದವಿ, ಪದವಿಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕೆಂದು ಪೋಷಕರು ಹಾಗೂ ಮಕ್ಕಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರು ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಲೇಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕಾಲೇಜುಗಳನ್ನು ಪುನರಾರಂಭಿಸಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕೆಂದು ಹೇಳಿದರು.

ನ್ಯಾಯಾಲಯದ ಆದೇಶವನ್ನು ನಾವು ಪಾಲನೆ ಮಾಡಬೇಕು. ಕೋರ್ಟ್ ಮಧ್ಯಂತರ ಆದೇಶ ಪಾಲಿಸಿ ಅಂತಿಮ ತೀರ್ಪಿನವರೆಗೂ ಸಂಯಮ ಕಾಪಾಡಬೇಕು ಎಂದು ಕೋರಿದರು.

ಶಾಲೆ, ಕಾಲೇಜುಗಳ ಆಡಳಿತ ಮಂಡಳಿ, ಪೋಷಕರು ಪರಸ್ಪರ ಗೊಂದಲ ಬಗೆಹರಿಸಿಕೊಂಡು ಸೌಹಾರ್ದಯುತ ವಾತಾವರಣ ನಿರ್ಮಿಸಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಿಎಂ ಮನವಿ ಮಾಡಿದರು.