ಹಿಜಾಬ್ ವಿಚಾರ ವಿಷಯಾಂತರ ಮಾಡಲು ಕಾಂಗ್ರೆಸ್ ಹೊರಟಿದೆ – ಸಿ.ಟಿ.ರವಿ

ಬೆಂಗಳೂರು: ಹಿಜಾಬ್ ವಿಚಾರವನ್ನು ವಿಷಯಾಂತರ ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,ಅಖಂಡ ಭಾರತದ ಅಶಯ ನಮಗಿದೆ. ಅಖಂಡ ಭಾರತದದಲ್ಲಿ ತ್ರಿವರ್ಣ ಧ್ವಜ ಹಾರಬೇಕು. ರಾಷ್ಟ್ರಧ್ವಜಕ್ಕೆ ಏನು ಗೌರವ ಕೊಡಬೇಕು ಆ ಗೌರವವನ್ನು ಕೊಟ್ಟಿದ್ದೇವೆ ಎಂದು ಹೇಳಿದರು.

ರಾಷ್ಟ್ರಧ್ವಜ ಕೆಳಗಿಳಿಸಿ ಭಾಗವಧ್ವಜ ಹಾರಿಸಿದರೆ ತಪ್ಪು. ರಾಷ್ಟ್ರಧ್ವಜದ ಕೆಳಗಡೆ ಭಾಗವಧ್ವಜ ಹಾರಿಸಿದರೆ ತಪ್ಪಲ್ಲ ಎಂದು ತಿಳಿಸಿದರು.

ಕಾಂಗ್ರೆಸ್‌ ನವರಿಗೆ ಭಾಗಧ್ವಜ  ಕಂಡರೆ ಆಗೋದಿಲ್ಲ ಎಂದು ಟೀಕಿಸಿದರು.

ಸ್ವಾತಂತ್ರ್ಯ ಬಂದ ಮೇಲೆ ತ್ರಿವರ್ಣ ಧ್ವಜ ಬಂದಿದೆ. ನಾವು ಅದನ್ನ ಒಪ್ಪಿಕೊಂಡಿದ್ದೇವೆ. ಸಚಿವ ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರ ಧ್ವಜ ತೆಗೆದು ಭಾಗವಧ್ವಜ ಹಾರಿಸುತ್ತೇವೆ ಎಂದು ಹೇಳಿಲ್ಲ ಎಂದು ಸಿ.ಟಿ.ರವಿ ಹೇಳಿದರು.

ಎಲ್ಲಾ ಸಂಘ ಸಂಸ್ಥೆಗಳಿಗೆ ಅವರದ್ದೇ ಆದ ಧ್ವಜಗಳಿವೆ. ಹಾಗಂತ ಅವರು ರಾಷ್ಟ್ರಧ್ವಜಕ್ಕೆ ಗೌರವ ಕೊಡೋದು ಬಿಟ್ಟಿದಾರಾ‌ ಎಂದು ಅವರು ಪ್ರಶ್ನಿಸಿದರು.

ರಾಣಿ ಚೆನ್ನಮ್ಮ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸೋಕೆ ಹೋದವರ ಮೇಲೆ ಗುಂಡು ಹಾರಿಸಿರೋದು ಕಾಂಗ್ರೆಸ್.

ಗುಂಡು ಹಾರಿಸಿ 11 ಜನರನ್ನು ಕೊಂದಿದ್ದು ಕಾಂಗ್ರೆಸ್ ಎಂಬುದನ್ನು ಮರೆಯಬೇಡಿ ಎಂದು ತಿರುಗೇಟು ನೀಡಿದರು.