ಯುವಕನ ಹತ್ಯೆ ಪ್ರಕರಣ: ಇಬ್ಬರ ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದಿರುವ ಯುವಕನ ಹತ್ಯೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಮುರುಗನ್ ತಿಳಿಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ  ಮಾತನಾಡಿದ ಅವರು, ಯುವಕ ಹರ್ಷ ಎಂಬಾತನ ಕೊಲೆಯಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಮ್ಮ ಪೊಲೀಸರು ಅಲರ್ಟ್ ಆಗಿದ್ದಾರೆ ಎಂದು ಹೇಳಿದರು.

ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ಹೇಳಿದರು.

ಜನತೆ ಶಾಂತಿ ಕಾಪಾಡಬೇಕು‌, ಸದಾ ನಿಮ್ಮ ಜತೆ ನಾವಿರುತ್ತೇವೆ, ಊಹಾಪೋಹದ ಸುದ್ದಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಮುರುಗನ್ ಮನವಿ ಮಾಡಿದರು.