ಮೈಸೂರು: ಮೈಸೂರು ನಗರದ ಸಿಸಿಬಿ ಪೆÇಲೀಸರು ಮೂರು ಮಂದಿ ಸರಗಳ್ಳರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಪೊಲೀಸರು ಒಟ್ಟು 8,50,000 ರೂ. ಬೆಲೆ ಬಾಳುವ 165 ಗ್ರಾಂ ಚಿನ್ನಾಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ ಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಸಿಸಿಬಿ ಘಟಕದ ಪೆÇಲೀಸರಿಗೆ ದೊರೆತ ಮಾಹಿತಿ ಮೇರೆಗೆ ಹಳೆಯ ಮೂವರು ಎಂ.ಒ ಆಸಾಮಿಗಳನ್ನು ಮೈಸೂರು ನಗರದ ಲಷ್ಕರ್ ಮೊಹಲ್ಲಾದ, ಅಶೋಕ ರಸ್ತೆಯಲ್ಲಿರುವ ಇಂಗುಲಾಂಬಿಕೆ ವೈನ್ಸ್ ಸ್ಟೋರ್ಸ್ ಮುಂಭಾಗ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿ, ಆರೋಪಿಗಳು ಮೈಸೂರು ನಗರ ಮತ್ತು ಮಂಡ್ಯ ಜಿಲ್ಲಾ ವ್ಯಾಪ್ತಿಗಳಲ್ಲಿ ಸರಗಳ್ಳತನ ಮಾಡಿರುವುದಾಗಿ ತಿಳಿಸಿದ್ದರ ಮೇರೆಗೆ ಆರೋಪಿಗಳಿಂದ ಒಟ್ಟು 4 ಸರಗಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ 165 ಗ್ರಾಂ ತೂಕದ 5 ಚಿನ್ನದ ಸರಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ದ್ವಿ ಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಈ ಪತ್ತೆ ಕಾರ್ಯದಿಂದ ಮೈಸೂರುನಗರದ ನರಸಿಂಹರಾಜ ಠಾಣೆಯ-1, ಕುವೆಂಪುನಗರ -1, ಲಕ್ಷ್ಮಿಪುರಂ1, ಶ್ರೀರಂಗಪಟ್ಟಣ ಪೆÇಲೀಸ್ ಠಾಣೆಯ 1 ಸರಗಳ್ಳತನ ಪ್ರಕರಣ ಸೇರಿದಂತೆ ಒಟ್ಟು 4 ಸರಗಳ್ಳತನ ಪ್ರಕರಣಗಳು ಪತ್ತೆಯಾಗಿದೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ ಗೀತಪ್ರಸನ್ನ ಹಾಗೂ ಸಿಸಿಬಿ ಘಟಕದ ಎಸಿಪಿ ಸಿ.ಕೆ ಅಶ್ವಥನಾರಾಯಣ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ನಡೆಸಿರುತ್ತಾರೆ.

