ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆ ಪೂರ್ಣಗೊಂಡಿದ್ದು, ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ.
ಈ ಬಗ್ಗೆ ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್ ಚತುರ್ವೇದಿ ಮಾಹಿತಿ ನೀಡಿದ್ದಾರೆ.
ಸಮೀಕ್ಷಾ ಸಮಿತಿ ತನ್ನ ಕಾರ್ಯವನ್ನು ಪೂರ್ಣಗೊಳಿಸಿದೆ, ಅದು ಎಲ್ಲಾ ಸ್ಥಳಗಳನ್ನು ವಿವರವಾಗಿ ಚಿತ್ರೀಕರಿಸಿದೆ.
ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು, ಕೊಳ ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮಾಡಲಾಗಿದೆ. ಮಂಗಳವಾರ ಅಲಹಾಬಾದ್ ನ್ಯಾಯಾಲಯಕ್ಕೆ ವಕೀಲ ಕಮಿಷನರ್ ತಮ್ಮ ವರದಿಯನ್ನು ಸಲ್ಲಿಸಲಿದ್ದಾರೆ.
ಮೂವರು ಆಯೋಗದ ಸದಸ್ಯರು, ವರದಿಯನ್ನು ಸಮಯಕ್ಕೆ ಪೂರ್ಣಗೊಳಿಸದಿದ್ದರೆ, ನಾವು ನ್ಯಾಯಾಲಯವನ್ನು ಹೆಚ್ಚು ಸಮಯ ಕೇಳುತ್ತೇವೆ ಎಂದು ಸರ್ಕಾರಿ ವಕೀಲ ಮಹೇಂದ್ರ ಪ್ರಸಾದ್ ಪಾಂಡೆ ತಿಳಿಸಿದ್ದಾರೆ.
ಇಡೀ ಪ್ರಕ್ರಿಯೆ ಶಾಂತವಾಗಿ ನಡೆದಿದೆ ಎಂದು ಹೇಳಿದ್ದಾರೆ.

