ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಮಹನೀಯರು, ದಾರ್ಶನಿಕರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ವಿಧಾನಸೌದದ ಆವರಣದಲ್ಲಿರುವ ಮಹಾತ್ಮಾಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಿರಿಯ ನಾಯಕರು, ಕಾಂಗ್ರೆಸ್ನ ಶಾಸಕರು, ವಿಧಾನ ಪರಿಷತ್ ಸದಸ್ಯರು ಧರಣಿಯಲ್ಲಿ ಭಾಗ
ಧಿಕ್ಕಾರ, ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದರು.
ಮನುವಾದ, ಕೇಸರಿಕರಣ, ನಾಗ್ಪುರ ಮತ್ತು ಆರ್ಎಸ್ಎಸ್ ಬೆಂಬಲಿತ ಪಠ್ಯ ಕ್ರಮ ಬೇಡ, ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣಗುರು, ಕನಕದಾಸರು ಬೇಕು ಆರ್ಎಸ್ಎಸ್ ಬೇಡ ಎಂದು ಘೋಷಣೆ ಕೂಗಿದರು.
ದಾರ್ಶನಿಕರನ್ನು, ಮಹಾತ್ಮರನ್ನು ಅಪಮಾನ ಮಾಡಿದ ಮನುವಾದಿ ಪಠ್ಯ ಪರಿಷ್ಕರಣಾ ಸಮಿತಿಯ ಎಲ್ಲಾ ಪರಿಷ್ಕರಣೆಗಳನ್ನು ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು.
ಪಠ್ಯ ಪರಿಷ್ಕರಣೆಯ ಮೂಲಕ ವಿಷ ಬೀಜ ಬಿತ್ತಿ, ಮಕ್ಕಳ ಮನಸ್ಸನ್ನು ಕೆಡಿಸಲಾಗುತ್ತಿದೆ. ಸುರಪುರ ನಾಯಕರಿಗೆ ಅವಮಾನ ಮಾಡಲಾಗಿದೆ, ಇತಿಹಾಸ ತಿರುಚಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಈ ಸರ್ಕಾರ ಆರ್ಎಸ್ಎಸ್ ಕೈಗೊಂಬೆಯಂತೆ ವರ್ತಿಸುತ್ತಿದೆ. ಶಿಕ್ಷಣ ಸಚಿವರು ಮನುವಾದಿಯಾಗಿದ್ದಾರೆ, ಕನ್ನಡ ವಿರೋಧಿ ಮನಸ್ಥಿತಿಯವನಿಗೆ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಮುಖಂಡರು ಒಕ್ಕೊರಲಿನಿಂದ ಕಿಡಿಕಾರಿದರು.

