ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿನಲ್ಲಿರುವ ಆರ್ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ.
ಕಚೇರಿಯ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಇದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಂಗಳವಾರ ಮುಂಜಾನೆ ಕಚೇರಿಯ ಮೇಲೆ ಬಾಂಬ್ ದಾಳಿಯಾಗಿದೆ. ಸ್ಫೋಟದಿಂದ ಕಚೇರಿ ಕಿಟಕಿಯ ಗಾಜುಗಳು ಜಕ್ಕಂಗೊಂಡಿವೆ . ಉಳಿದಂತೆ ಹೆಚ್ಚಿನ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಸುತ್ತಮುತ್ತಲ ಪರಿಸರವನ್ನು ಪರಿಶೀಲಿಸಿದ್ದಾರೆ .
ಇತ್ತೀಚೆಗೆ ಕೇರಳದಲ್ಲಿ ಈ ರೀತಿಯ ಬಾಂಬ್ ದಾಳಿಗಳು ಸಾಮಾನ್ಯವಾಗಿಬಿಟ್ಟಿವೆ.
ಕೇರಳದ ತಿರುವನಂತಪುರಂನ ಸಿಪಿಐಎಂನ ಕೇಂದ್ರ ಕಚೇರಿ ಮೇಲೂ ದಾಳಿ ನಡೆಸಲಾಗಿತ್ತು.
ಹಲವಾರು ಕಾಂಗ್ರೆಸ್ ಕಚೇರಿಗಳ ಮೇಲೂ ದಾಳಿಯಾಗಿತ್ತು.

