ಬೆಂಗಳೂರು: ಪಿಎಫ್ ಐ ಸಂಘಟನೆಯನ್ನ 5 ವರ್ಷಗಳ ಕಾಲ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಕೆಎಫ್ ಡಿ ಸಿಮಿ ರೂಪಾಂತರ ಫಲಶೃತಿ ಪಿಎಫ್ ಐ ಎಂದರು.
ಪಿಎಫ್ ಐ ವಿಧ್ವಂಸಕ ಕೃತ್ಯ ನಡೆಸಿರೋದು ಗೊತ್ತಾಗಿದೆ. ಈ ಬಗ್ಗೆ ಎಲ್ಲರೂ ಒತ್ತಾಯ ಮಾಡಿದ್ದರು.
ನಮ್ಮ ದೇಶದಲ್ಲಿ ವಿಧ್ವಂಸಕ ಕೃತ್ಯವೆಸಗಲು ಅವಕಾಶವಿಲ್ಲ ಮೋದಿ ಅಮಿತ್ ಶಾ ನಾಯಕತ್ವದಲ್ಲಿ ಪಿಎಫ್ ಐ ಬ್ಯಾನ್ ಆಗಿದೆ ಎಂದು ಹೇಳಿದರು.
ಪಿಎಫ್ಐ ನಿಷೇಧಿಸುವಂತೆ ವಿರೋಧ ಪಕ್ಷದವರೂ ಸೇರಿದಂತೆ ಎಲ್ಲರೂ ಮನವಿ ಮಾಡಿದ್ದೆವು. ಇದೀಗ ಉತ್ತರ ಸಿಕ್ಕಿದೆ ಎಂದರು.
ಪಿಎಫ್ಐ ಕಾರ್ಯಕರ್ತರು ದುಷ್ಕೃತ್ಯ ನಡೆಸಲು ಮುಂದಾಗಿದ್ದರು. ಹಲವು ದೇಶದ್ರೋಹ ಚಟುವಟಿಕೆಗಳಲ್ಲಿಯೂ ಪಿಎಫ್ ಐ ಭಾಗಿಯಾಗಿತ್ತು ಹಾಗಾಗಿ ನಿಷೇಧ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

