ಶ್ರೀಮಂತ ಮಹಿಳೆಯರೇ ಟಾರ್ಗೆಟ್: ವಿವಾಹವಾಗಿ ಹಣ ಆಭರಣ ಪಡೆದು ಪರಾರಿಯಾದ ವಂಚಕ ಉದ್ಯಮಿ

ಮೈಸೂರು: ಉದ್ಯಮಿ ಎಂದು ನಂಬಿಸಿ ಶ್ರೀಮಂತ ಮಹಿಳೆಯರನ್ನ ವಿವಾಹವಾಗಿ ಹಣ ಚಿನ್ನಾಭರಣ ಪಡೆದು ಪರಾರಿ ಆಗಿರುವ ವ್ಯಕ್ತಿ ವಿರುದ್ದ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಡೈವೋರ್ಸ್ ಆದವರು ಮತ್ತು 40 ವರ್ಷ ಮೇಲ್ಪಟ್ಟ ಅವಿವಾಹಿತ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದ ಖದೀಮ ಹಲವಾರು ಮಹಿಳೆಯರಿಗೆ ವಂಚಿಸಿದ್ದಾನೆ.

ಕೇರಳ ಮೂಲದ ಸುನೀಶ್ ಪಿಳ್ಳೆ(33)ವಿರುದ್ದ  ಮೈಸೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ಮೈಸೂರಿನ ವಿಜಯ ನಗರ ಮಹಿಳೆ ಸುನೀಶ್ ಪಿಳ್ಳೈ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಐದು ವರ್ಷದ ಹಿಂದೆ ನಾವು ವಿವಾಹವಾಗಿದ್ದು ನಾಲ್ಕು ವರ್ಷದ ಹೆಣ್ಣು ಮಗುವಿದೆ.

ವಿವಾಹದ ಬಳಿಕ ಆಗಾಗ್ಗೆ ಹಣಕ್ಕಾಗಿ ಪೀಡಿಸುತ್ತಿದ್ದ ಸುನೀಶ್, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂ. ಪಡೆದಿದ್ದ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ.

ಆಗಾಗ್ಗೆ ಮನೆಗೆ ಬಂದು ಹಣಕ್ಕಾಗಿ ಪೀಡಿಸುತ್ತಿದ್ದ. ಈ ಬಗ್ಗೆ ಆಕೆ ಸುನೀಶ್ ಪಿಳ್ಳೈ ಅವರ ಪೋಷಕರಿಗೆ  ಮಾಹಿತಿ ನೀಡಿದ್ದಾರೆ.

ಸಮಸ್ಯೆ ಬಗೆಹರಿಸುವುದಾಗಿ ಹೇಳಿ ಕೊನೆಗೆ ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಪ್ಪಿಸಿಕೊಂಡಿದ್ದಾರೆ.

ಎಂದು ಆ ಮಹಿಳೆ ತಿಳಿಸಿದ್ದಾರೆ.

ಈತ ಸೇರಿದಂತೆ ಕುಟುಂಬದ ನಾಲ್ವರ ವಿರುದ್ದ  ವರದಕ್ಷಿಣೆ ಕಿರುಕುಳ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಸುನೀಶ್ ಪಿಳ್ಳೈ ಮ್ಯಾಟ್ರಿಮೋನಿಯಲ್ಲಿ  ಶ್ರೀಮಂತ ಉದ್ಯಮಿ ಎಂದು ಪ್ರೊಫೈಲ್ ಕ್ರಿಯೇಟ್ ಮಾಡಿಕೊಂಡು  ಶ್ರೀಮಂತ ಮಹಿಳೆಯರನ್ನು ಪರಿಚಯಿಸಿಕೊಂಡು ಮದುವೆಯಾಗುತ್ತಿದ್ದ.

ನಂತರ ಅವರೊಂದಿಗೆ ಕೆಲ ತಿಂಗಳ ಕಾಲ ಸಂಸಾರ ಮಾಡಿ ಉದ್ಯಮದಲ್ಲಿ ನಷ್ಟವಾಗಿದೆ  ಎಂದು ಹಣ ಪಡೆದು ವಂಚಿಸಿ ಪರಾರಿಯಾಗುತ್ತಿದ್ದ.

ಈಗಾಗಲೇ ಈತನ ವಿರುದ್ದ ಬೆಂಗಳೂರಿನಲ್ಲಿ ನಾಲ್ಕೈದು ಪ್ರಕರಣಗಳು ದಾಖಲಾಗಿದೆ.

ಸುನೀಶ್ ಪಿಳ್ಳೈ ವಿರುದ್ದ ಕೇರಳದಲ್ಲಿ  ಅಪಹರಣ ಪ್ರಕರಣ ಕೂಡ ದಾಖಲಾಗಿದ್ದು, ಸ್ಥಳೀಯ ಪೊಲೀಸರು ಲುಕ್ ಔಟ್ ನೋಟಿಸ್  ಜಾರಿ ಮಾಡಿದ್ದಾರೆ.

ಈತನ ಪತ್ತೆಗೆ ಮೈಸೂರು ಸೇರಿದಂತೆ ಎಲ್ಲೆಡೆ ಶೋಧ ಕಾರ್ಯ ನಡೆಯುತ್ತಿದೆ.

ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವೈದ್ಯರು, ಸಾಫ್ಟ್‌ವೇರ್ ಎಂಜಿನಿಯರ್, ಶ್ರೀಮಂತ ವಿಚ್ಛೇದಿತ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ವಿವಾಹವಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾನೆ ಈ ಕತರ್ನಾಕ್ ಪಿಳ್ಳೈ.

12 ಕ್ಕೂ ಹೆಚ್ಚು ಮಂದಿ ಮಹಿಳೆಯರನ್ನು ಈತ ವಂಚಿಸಿದ್ದಾನೆ ಎಂದು ಸಂತ್ರಸ್ತೆ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.