ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಹತ್ತು ನಿಮಿಷ ಧ್ಯಾನ ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಟೀಕಿಸಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ.
10 ನಿಮಿಷದ ದ್ಯಾನದ ವಿಚಾರದಲ್ಲೂ ಸಿದ್ದು ಗೊಂದಲ ಸೃಷ್ಟಿಗೆ ಪ್ರಯತ್ನ ಮಾಡುತ್ತಿರುವುದು ದುರಾದೃಷ್ಟಕರ ಎಂದು ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಕ್ಕಳು ಧ್ಯಾನ ಮಾಡುವುದು ಹೇಗೆ ಗಿಮಿಕ್ ಆಗುತ್ತದೆ. ಅದನ್ನು ನೀವು ಜನತೆಗೆ ವಿವರಿಸುವಿರಾ ಎಂದು ಟಾಂಗ್ ನೀಡಿದ್ದಾರೆ.
ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ.
ಆದರೆ, ನೀವು ಧ್ಯಾನ, ಯೋಗ ಮಾಡಿದರೆ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ನಾಗೇಶ್ ಕಿಡಿಕಾರಿದ್ದಾರೆ.

