ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಗ್ರೀನ್ ಸಿಗ್ನಲ್: 7ನೇ ವೇತನ ಆಯೋಗ ರಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಸಮಯ ಹತ್ತಿ ಬಂದಿದೆ.

ವಿಧಾನಸಭೆ ಚುನಾವಣೆ ಸಮೀಪ ಇರುವ ಸಂದರ್ಭದಲ್ಲೇ ರಾಜ್ಯ ಸರ್ಕಾರ 7ನೇ ವೇತನ ಆಯೋಗ ರಚನೆ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡುತ್ತಿದೆ.

ಬಹುದಿನಗಳ ಬೇಡಿಕೆಯಂತೆ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಣೆ ಮಾಡುವ ಕುರಿತು 7ನೇ ವೇತನ ಆಯೋಗ ರಚನೆ ಮಾಡಲಾಗಿದೆ.

ದಾವಣಗೆರೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಏಳನೇ ವೇತನ ಆಯೋಗ ರಚಿಸಬೇಕೆಂದು ಸರ್ಕಾರಿ ನೌಕರರ ಸಂಘ ಒತ್ತಾಯಿಸುತ್ತಲೇ ಬಂದಿತ್ತು.

ಕಳೆದ ಸೆಪ್ಟೆಂಬರ್‍ನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲೂ ಮುಖ್ಯಮಂತ್ರಿಗಳು ಅಕೋಬರ್‍ನಲ್ಲಿ ಏಳನೇ ವೇತನ ಆಯೋಗ ರಚಿಸಲಾಗುವುದೆಂದು ಪ್ರಕಟಿಸಿದ್ದರು.

ವೇತನ ಆಯೋಗಕ್ಕೆ ವೇತನ ಪರಿಷ್ಕರಿಸಿ ಶಿಫಾರಸಲು ಮಾಡಲು ನಾಲ್ಕು ತಿಂಗಳು ಕಾಲಾವಕಾಶ ಬೇಕಾಗುತ್ತದೆ.

ನವೆಂಬರ್‍ನಲ್ಲಿ ಆಯೋಗ ರಚನೆಯಾದರೆ 2023ರ ಮಾರ್ಚ್ ಒಳಗೆ ಆಯೋಗ ವರದಿ ನೀಡಬಹುದು ಎಂದು ನಿರೀಕ್ಷೆ ಇದೆ.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7 ನೇ ವೇತನ ಆಯೋಗ ರಚನೆಯನ್ನು ಬಜೆಟ್‍ನಲ್ಲಿ ಘೋಷಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ರಾಜ್ಯದಲ್ಲಿ 7 ನೇ ವೇತನ ಆಯೋಗ 2022ರ ಜುಲೈನಿಂದ ಜಾರಿಗೆ ಬರಬೇಕಾಗಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಬೇಡಿಕೆಯಾದ ಕೇಂದ್ರದ ಮಾದರಿ ವೇತನ ಕ್ಕಾಗಿ ನೌಕರರು ಒತ್ತಡ ತರುತ್ತಿದ್ದಾರೆ.

ಆದರೆ ಆ ವೇತನ ಸಿಕ್ಕುವುದೇ ಅಥವಾ ಸರ್ಕಾರ ಆಯೋಗದ ಮೂಲಕ ಮೂಗಿಗೆ ತುಪ್ಪ ಸವರುವುದೇ ಎಂಬುದು ನೌಕರರ ಪ್ರಶ್ನೆಯಾಗಿದೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಸಿದಂತೆ 1966ರಿಂದ 2017ರ ಅವ ಯಲ್ಲಿ 11 ವೇತನ ಆಯೋಗ ರಚನೆಯಾಗಬೇಕಾಗಿತ್ತು. ಆದರೆ ರಚನೆಯಾಗಿರುವುದು 6 ಮಾತ್ರ.

3 ಅಧಿಕಾರಿ ಸಮಿತಿ ಹಾಗೂ ಒಂದು ಸಂಪುಟ ಉಪಸಮಿತಿ ರಚನೆಯಾಗಿದೆ. ಇದರಿಂದ ಅನ್ಯಾಯವಾಗಿದೆ. ವೇತನ ಪರಿಷ್ಕರಣೆ ವೈಜ್ಞಾನಿಕವಾಗಿ ಆಗದೆ ಅವೈಜ್ಞಾನಿಕವಾಗಿದೆ ಎಂದು ನೌಕರರು ಹೇಳುತ್ತಾರೆ.