ಮೈಸೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಮೇಟಗಳ್ಳಿ ಠಾಣೆಗೆ ಭೇಟಿ ನೀಡಿ ಆರೋಪಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದರು.
ಆರೋಪಿಯು ತನ್ನ ಹೆಸರನ್ನು ಪ್ರೇಮ್ ರಾಜ್ ಎಂದು ಹೇಳಿಕೊಂಡಿದ್ದ.
ಮೇಟಗಳ್ಳಿಯ ಲೋಕರಂಜನ್ ನಗರದಲ್ಲಿ ಮನೆ ಬಾಡಿಗೆಗೆ ಪಡೆದಿದ್ದ.ಆದಾರ್ ಕಾರ್ಡ್ ನಲ್ಲಿ ಹುಬ್ಬಳ್ಳಿಯ ವಿಳಾಸವಿದೆ.
ಈ ಬಗ್ಗೆ ಮನೆ ಮಾಲೀಕರನ್ನು ವಿಚಾರಿಸಿದಾಗ ಅವರು ಆತಂಕಕ್ಕೆ ಒಳಗಾಗಿದ್ದಾರೆ.ತಮ್ಮ ಮನೆಯಲ್ಲೇ ಉಗ್ರ ಅಡಗಿದ್ದ ಎಂಬ ವಿಷಯ ಗೊತ್ತಾಗುತ್ತಿದ್ದಂತೆ ಅವರು ಆಘಾತಗೊಂಡಿದ್ದಾರೆ.
ಬಾಡಿಗೆಗೆ ಇದ್ದವ ಪ್ರೇಮ್ ರಾಜ್ ಎಂದು ಹೆಸರು ಹೇಳಿದ್ದ.1800 ರೂಗೆ ಬಾಡಿಗೆ ಕೊಡಿತ್ತಿದ್ದ.ಕನ್ನಡ ಮಾತನಾಡುತ್ತಿದ್ದ.ಬೆಳಗ್ಗೆ ಮನೆಯಿಂದ ಹೊರಹೋದರೆ ರಾತ್ರಿ ಬರುತ್ತಿದ್ದ.ಹಾಗಾಗಿ ಆತನ ಬಗ್ಗೆ ಬೇರೆ ಯಾವುದೇ ವಿಷಯ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಒಟ್ಟಾರೆ ಮೈಸೂರು ಪೊಲೀಸರು ಆರೋಪಿ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಿ ಮಂಗಳೂರು ಪೊಲೀಸರಿಗೆ ನೆರವಾಗಿದ್ದಾರೆ.
ಮೈಸೂರಿನಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

