ಆಪ್ ನಿಂದ ಕಾಂಗ್ರೆಸ್ ಮತ ಕಬಳಿಕೆಯೇ ಗುಜರಾತ್ ನಲ್ಲಿ ಸೋಲಿಗೆ ಕಾರಣ –ಸಿದ್ದು

ಮೈಸೂರು: ಹೆಚ್ಚಿನ ಕ್ಷೇತ್ರಗಳಲ್ಲಿ ಆಮ್ಆದ್ಮಿ ಪಕ್ಷ ಕಾಂಗ್ರೆಸ್ಮತಗಳನ್ನು ಕಬಳಿಸಿರುವುದರಿಂದ ಗುಜರಾತ್ನಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಎರಡೂ ರಾಜ್ಯಗಳ‌‌ ಚುನಾವಣಾ ಫಲಿತಾಂಶದ ಕುರಿತು ಅವರು ಪ್ರತಿಕ್ರಿಯೆ ನೀಡಿದರು.

ಗುಜರಾತ್ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ ಆಮ್ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ ನಮ್ಮ ಮತಗಳನ್ನು ಪಡೆದುಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಬಹುತೇಕ ಕ್ಷೇತ್ರಗಳಲ್ಲಿ ಆಮ್ಆದ್ಮಿ ಪಕ್ಷ ನಮ್ಮ ಮತಗಳನ್ನೇ ಕಬಳಿಸಿದೆ. ಇದರಿಂದ ಗುಜರಾತ್ನಲ್ಲಿ ಹಿನ್ನಡೆಯಾಗಿದೆ ಆದರೆ ಹಿಮಾಚಲ ಪ್ರದೇಶದಲ್ಲಿ ರೀತಿ ಆಗಿಲ್ಲ. ಕಾಂಗ್ರೆಸ್ಪಕ್ಷ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವುದಿಲ್ಲ.

ಹಾಗೆ ಯೋಚಿಸುವುದಾದರೆ ದೆಹಲಿಯ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಾ ಎಂದು ಪ್ರಶ್ನಿಸಿದರು.

ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌  ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ.

ಹಾಗಾಗಿ ಬೇರೆ ರಾಜ್ಯಗಳ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರುವುದಿಲ್ಲ ಎಂಬುದು ನನ್ನ ಅನಿಸಿಕೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.