ಬೆಂಗಳೂರು: ಕನ್ನಡಿಗ ಖರ್ಗೆ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಿದ್ದರೂ ಈಗಲೂ ಆ ಪಕ್ಷದವರು ಜೀ ಹುಜೂರ್ ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿ ವ್ಯಂಗ್ಯವಾಡಿರುವ ಬಿಜೆಪಿ,ಯಾವುದೇ ನಿರ್ಧಾರ ತೆಗೆದುಕೊಳ್ಳಲು ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಸ್ವಂತಿಕೆಯನ್ನೇ ಮರೆತಿದ್ದಾರೆ ಎಂದು ಟೀಕಿಸಿದೆ.
ರಾಜ್ಯಾಧ್ಯಕ್ಷರಿಂದ ಹಿಡಿದು ಯುವ ಕಾಂಗ್ರೆಸ್ ಅಧ್ಯಕ್ಷರವರೆಗೂ ಬೇಲ್ ಮೇಲೆ ಬಾಳು ಸಾಗಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪಕ್ಕದ ರಾಜ್ಯದಿಂದ ನಾಯಕರನ್ನು ಆಮದು ಮಾಡಿಕೊಂಡು ರಾಜ್ಯವನ್ನು ಲೂಟಿ ಹೊಡೆಸಿ ಗೃಹಮಂತ್ರಿಗಳನ್ನಾಗಿ ಮಾಡಿದ್ದರು ಎಂದು ಟೀಕಿಸಿದೆ.
ಡಬಲ್ ಎಂಜಿನ್ ವೇಗದ ಅಭಿವೃದ್ಧಿಯನ್ನು ರಾಜ್ಯಕ್ಕೆ ನೀಡಲು ತಲೆ ಕೆಳಗಾಗಿ ನಿಂತರೂ ಸಾಧ್ಯವಾಗದ ಕಾಂಗ್ರೆಸ್ ಯಾವ ಮಟ್ಟಕ್ಕಾದರೂ ಇಳಿದು ಅಧಿಕಾರಕ್ಕೆ ಬಂದು ರಾಜ್ಯವನ್ನು ಎಟಿಎಂ ಆಗಿ ಮಾಡಿಕೊಂಡು ಲೂಟಿ ಹೊಡೆಯಲು ಹವಣಿಸುತ್ತಿದೆ.
ಕನ್ನಡಿಗರು ಇದನ್ನು ಎಂದಿಗೂ ಸಾಧ್ಯವಾಗಿಸುವುದಿಲ್ಲ ಎಂದು ಬಿಜೆಪಿ ಕಾಲೆಳೆದಿದೆ.

