ವಿಧಾನಸಭೆಯಲ್ಲಿ ಭಾವಚಿತ್ರಗಳ ಅನಾವರಣ ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು -ಬೊಮ್ಮಾಯಿ

ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗದೆ,ಇದು ಹಲವು ವಿಚಾರಗಳ ಬಗ್ಗೆ ಚರ್ಚಿಸಿ, ಜನರಿಗೆ ಪರಿಹಾರ ಒದಗಿಸುವ ಅಧಿವೇಶನವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಹೇಳಿದರು.

ರಾಜ್ಯವನ್ನು ಮುನ್ನಡೆಸುವ ದಿಸೆಯಲ್ಲಿ ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಬೇಕಿದೆ.

ಹಲವಾರು ಕಾನೂನುಗಳ ರಚನೆಗಳ ಉದ್ದೇಶದಿಂದ ಕಲಾಪ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವಿಧಾನಸಭೆಯಲ್ಲಿ ಭಾವಚಿತ್ರಗಳ ಅನಾವರಣ ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.

ವಿಧಾನಸಭೆಯಲ್ಲಿ ಭಾವಚಿತ್ರಗಳ ಅನಾವರಣವಾಗಿದ್ದಕ್ಕೆ, ಕಾಂಗ್ರೆಸ್ ಅಪಸ್ವರ ಎತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲ ಮಹನೀಯರುಗಳ ಭಾವಚಿತ್ರವನ್ನು ಅಳವಡಿಸುವ ಬಗ್ಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿರುವ ವಿಚಾರ ಗಮನಕ್ಕೆ ಬಂದಿಲ್ಲ ಎಂದು ಹೇಳಿದರು.

ವಿಧಾನಸಭೆಯಲ್ಲಿ ಭಾವಚಿತ್ರ ಅನಾವರಣಗೊಳಿಸುವುದು ಸ್ಪೀಕರ್ ರವರ ವಿವೇಚನೆಗೆ ಬಿಟ್ಟಿರುವ ವಿಚಾರ,ಆದರೂ‌ ವಿರೋಧಪಕ್ಷದ ನಾಯಕರು ಹಾಗೂ ಸ್ಪೀಕರ್ ಜತೆ ಈ ವಿಚಾರದ ಬಗ್ಗೆ ಮಾತಾನಾಡುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.