ಸಂತೋಷ್    ಪಾಟೀಲ್ಆತ್ಮಹತ್ಯೆಪ್ರಕರಣ: ಬಿರಿಪೋರ್ಟ್     ನಲ್ಲಿನ ಸಾಕ್ಷ್ಯಗಳಹಾಜರಿಗೆಕೋರ್ಟ್ಆದೇಶ

ಬೆಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿ ರಿಪೋರ್ಟ್ ನಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಗಳನ್ನ ಹಾಜರುಪಡಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.

ಖುದ್ದು ತನಿಖಾಧಿಕಾರಿಯೇ ಸಾಕ್ಷ್ಯ ಹಾಜರುಪಡಿಸಬೇಕೆಂದು ಕೋರ್ಟ್ ಸೂಚಿಸಿದೆ.

ಸಂತೋಷ್ ಪಾಟೀಲ್ 2 ಮೊಬೈಲ್​​ಗಳ ಡಾಟಾದ ಸಂಪೂರ್ಣ ಮಾಹಿತಿ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಬಂದ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನ ನೀಡುವಂತೆ ಸೂಚಿಸಿದೆ.

ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಸಂತೋಷ್ ಪಾಟೀಲ್ ಸಹೋದರ, ಅಸಲಿ ಸಾಕ್ಷ್ಯಗಳನ್ನ ಮರೆಮಾಚಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು. ಈ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿದ್ದುದನ್ನು ಸ್ಮರಿಸಬಹುದು.