ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುವಂತೆ ಸಿದ್ದು ಮೇಲೆ ಬೆಂಬಲಿಗರ ಒತ್ತಡ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಆದರೂ ಸಿದ್ದು ಬೆಂಬಲಿಗರು ಬಾರಿಯೂ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುವಂತೆ ಒತ್ತಡ ಹಾಕಿದ್ದಾರೆ.

ಗುರುವಾರ ಬೆಂಗಳೂರಿನ ಸಿದ್ಧರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ  ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರು, ಕಳೆದ ಬಾರಿಯಂತೆ ಬಾರಿ ಆಗಲು ಬಿಡುವುದಿಲ್ಲ.ನಮ್ಮ ಕ್ಷೇತ್ರಕ್ಕೇ ಬನ್ನಿ ಅಲ್ಲಿಂದಲೆ ಸ್ಪರ್ಧಿಸಿ ಎಂದು ಒತ್ತಾಯಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ ದೇವೇಗೌಡರ ವಿರುದ್ಧ ಸಿದ್ಧರಾಮಯ್ಯ  ಸೋಲನುಭವಿಸಿದ್ದರು.