ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರ ಭದ್ರತಾ ಕೊಠಡಿ ಸೇರಿದಂತೆ ವಿವಿಧ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ಚರ್ಚಿಸಿದರು.
ಡಾ.ಕೆ.ವಿ.ರಾಜೇಂದ್ರ ಅವರು ಗುರುವಾರ ನಗರದ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ಭದ್ರತಾ ಕೊಠಡಿಗಳನ್ನು ಸ್ಥಾಪಿಸುವ ಕುರಿತು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲೆಯ ಎಲ್ಲಾ ಹನ್ನೊಂದು ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳ ದಾಸ್ತಾನು ಕೊಠಡಿ, ಮತ ಎಣಿಕೆ ಕೊಠಡಿ ಮತ್ತು ಭದ್ರತಾ ಕೊಠಡಿಗಳನ್ನು ಸ್ಥಾಪಿಸುವ ಕುರಿತು ನಗರ ಪೋಲಿಸ್ ಆಯುಕ್ತರಾದ ರಮೇಶ್ ಬಾನೊತ್ ಅವರೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿದರು.
ಮಾಧ್ಯಮ ಕೊಠಡಿ, ಪೊಲೀಸ್ ಕಂಟ್ರೋಲ್ ರೂಂ, ಗಣಕ ಯಂತ್ರ, ಇಂಟರ್ನೆಟ್ ಸಂಪರ್ಕ ವ್ಯವಸ್ಥೆ, ಭದ್ರತಾ ವ್ಯವಸ್ಥೆ, ಸ್ಟ್ರಾಂಗ್ ರೂಂ ವಿವಿಧ ಕೊಠಡಿಗಳ ಸ್ಥಾಪಿಸುವ ಹಾಗೂ ಪಾರ್ಕಿಂಗ್ ವ್ಯವಸ್ಥೆಯ ಕುರಿತು ಸ್ಥಳ ವೀಕ್ಷಣೆ ಮಾಡಿದರು.
ಅಗತ್ಯ ಎಲ್ಲಾ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ದಿನೇಶ್ ಕುಮಾರ್, ಸಂಚಾರ ಹಾಗೂ ಅಪರಾದ ವಿಭಾಗದ ಪೊಲೀಸ್ ಉಪ ಆಯುಕ್ತರಾದ ಜಾಹ್ನವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಡಾ.ಕೆ.ವಿ.ರಾಜೇಂದ್ರ ಮಾತುಕತೆ ನಡೆಸಿದರು.

