ಡಬಲ್ ಎಂಜಿನ್ ಸರ್ಕಾರ ಕೊಡುಗೆ ಅಪಾರ:  ಬಿಜೆಪಿ ಗೆಲುವು‌ ಖಚಿತ -ಡಿಸಿಎಂ ಪಾಠಕ್

ಮೈಸೂರು: ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಗೆ ಬಿಜೆಪಿ ಸರ್ಕಾರ ವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್  ಪಾಠಕ್ ತಿಳಿಸಿದರು.

ಮಂಗಳವಾರ ಮೈಸೂರಿನ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದ ಹಲವಾರು ಅಭಿವೃದ್ಧಿ ಕೆಲಸಗಳು, ಯೋಜನೆ ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಿನ ಅನುದಾನವನ್ನು ನೀಡಿದ್ದಾರೆ.

ಮೈಸೂರು-ಬೆಂಗಳೂರು ನಡುವೆ ದಶಪಥ ರಸ್ತೆಯನ್ನು ನಿರ್ಮಾಣ ಮಾಡಿ, ಅದರ ಉದ್ಘಾಟನೆ ಮಾಡಿದ ಮೋದಿಯವರು ವಾಹನ ಚಾಲಕರು, ಜನರಿಗೆ ಬಹಳ ಅನುಕೂಲ ಮಾಡಿಕೊಟ್ಟಿದ್ದಾರೆ.

ಇದರಿಂದಾಗಿ ಮೈಸೂರಿಗೆ ಮತ್ತಷ್ಟು ಕೈಗಾರಿಕೆಗಳು ಬರಲಿದ್ದು, ಸಾವಿರಾರು ಮಂದಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಸೆಮಿ ಕಂಡಕ್ಟರ್ ಹಬ್ ನಿರ್ಮಾಣ ಘೋಷಣೆ ಮಾಡಿದ್ದು, ಇಲ್ಲಿ ನಿರ್ಮಾಣ ವಾದರೆ, ವಾಹನಗಳಿಗೆ, ಎಲೆಕ್ಟ್ರಾನಿಕ್ ವಸ್ತುಗಳಿಗೆ ಬೇಕಾದ ಸೆಮಿ ಕಂಡಕ್ಟರ್ ಉತ್ಪಾದನೆ ಯಾಗಲಿದೆ.

ಇದು ಇಡೀ ವಿಶ್ವಕ್ಕೆ ಪೂರೈಕೆ ಯಾಗಲಿದೆ, ಈ ಹಬ್ ನಿರ್ಮಾಣ ದಿಂದಾಗಿ ಸಾವಿರಾರು ಮಂದಿ ಗೆ ಉದ್ಯೋಗ ಸಿಗಲಿದೆ.ಅಲ್ಲದೇ ಬೆಂಗಳೂರು ಬಿಟ್ಟರೆ ಮೈಸೂರೇ ಬೃಹತ್ ನಗರವಾಗಿ ಬೆಳೆದು, ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳಲಿದೆ ಎಂದು ತಿಳಿಸಿದರು.

ಉಡಾನ್ ಯೋಜನೆ ಯಡಿ ಎಲ್ಲಾ ವಿಮಾನ ನಿಲ್ದಾಣ ಗಳಿಗೂ ವಿಮಾನ ಹಾರಾಟ ಹಾಗೂ ಸಂಪರ್ಕ ವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಲ್ಪಿಸಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ವಿಸ್ತರಣೆ ಹಾಗೂ ಅಭಿವೃದ್ಧಿಗೂ ಅನುದಾನ ನೀಡಿದೆ.ಇದೆಲ್ಲಾ ಡಬಲ್‌ ಇಂಜಿನ್ ಸರ್ಕರದಿಂದ‌ ಮಾತ್ರ‌ ಸಾಧ್ಯ‌ ಎಂದು ತಿಳಿಸಿದರು.

ಪ್ರತಿಯೊಂದು ಮನೆಗೂ ಜಲಜೀವನ್ ಮಿಷನ್, ಅಮೃತ್ ಯೋಜನೆಯಡಿ ಶುದ್ದ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.

ಪ್ರತಿಯೊಂದು ಗ್ರಾಮಕ್ಕೂ, ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ, ರಸ್ತೆ ಸಂಪರ್ಕ ಗಳನ್ನು ಕಲ್ಪಿಸಿ, ಅಭಿವೃದ್ಧಿ ಪಡಿಸಲಾಗಿದೆ.

ಡಬಲ್ ಎಂಜಿನ್ ಸರ್ಕಾರ ವಿದ್ದರೆ ಮಾತ್ರ ರಾಜ್ಯ ಹಾಗೂ ದೇಶದ ಅಭಿವೃದ್ಧಿಯಾಗಲು ಸಾಧ್ಯ ಹಾಗಾಗಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಗಾಗಿ ಮತದಾರರು ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳನ್ನು ಗೆಲ್ಲಿಸಿಕೊಡಬೇಕು ಎಂದು ಪಾಠಕ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು  ಮೇಯರ್ ಶಿವಕುಮಾರ್, ಬಿಜೆಪಿ ನಗರ ಕಾರ್ಯಾಧ್ಯಕ್ಷ ಹೆಚ್.ಜಿ.ಗಿರಿಧರ್,  ಜಿಲ್ಲಾ ಸಹ ವಕ್ತಾರ ಡಾ.ಕೆ.ವಸಂತ್ ಕುಮಾರ್, ಮೈಸೂರು ವಿಭಾಗ ಮಾಧ್ಯಮ ಕೇಂದ್ರ ದ ಸಂಯೋಜಕ ನಾಗೇಶ್, ಜಿಲ್ಲಾ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಸಹ ವಕ್ತಾರ ಕೇಬಲ್ ಮಹೇಶ್, ಸಹ ಸಂಚಾಲಕ ಪ್ರದೀಪ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.