ಮೈಸೂರು: ಸಿದ್ದರಾಮಯ್ಯ ಅವರು 5 ವರ್ಷವೂ ಪೂರ್ಣಾವಧಿ ಸಿ ಎಂ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ನೂತನ ಸಚಿವ ಎಂಬಿ ಪಾಟೀಲ್ ಹೊಸ ಬಾಂಬ್ ಸಿಡಿ ಸಿದ್ದಾರೆ.
ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳುವ ಮೂಲಕ ಎಂ.ಬಿ.ಪಾಟೀಲ್ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.
ಮೈಸೂರಿನ ಸುತ್ತೂರಿನಲ್ಲಿ ಶ್ರೀ ಶಿವರಾತ್ರಿ ದೇಶೀ ಕೇಂದ್ರ ಸ್ವಾಮೀಜಿಯವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಆಗುವುದಿಲ್ಲ,
ಸಿಎಂ ಬದಲಾವಣೆ ಬಗ್ಗೆ AICC ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಕೂಡಾ ಎಂ.ಬಿ.ಪಾಟೀಲ್ ತಿಳಿಸಿದರು.
ಬಿಜೆಪಿ ಅಧಿಕಾರವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ.
ಪಿ ಎಸ್ ಐ, ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.
ಎಲ್ಲಾ ಹಗರಣಗಳನ್ನ ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ.
ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಗ್ಯಾರೆಂಟಿ ಕಾರ್ಡ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಪಾಟೀಲ್,
ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆ ನೀಡಲಾಗಿದೆ.
ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದರು.

