ಶಿವಮೊಗ್ಗ: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಂದಲೇ ಭಜರಂಗದಳ,ಆರ್ ಎಸ್ ಎಸ್ ಸಂಘಟನೆ ನಿಷೇಧಿಸಲು ಆಗಲಿಲ್ಲ, ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸಾಧ್ಯವೆ ಎಂದು ಶಿವಮೊಗ್ಗ ಬಿಜೆಪಿ ಶಾಸಕ ಚನ್ನಬಸಪ್ಪ ಪ್ರಶ್ನಿಸಿದ್ದಾರೆ.
ಶಿವಮೊಗ್ಗ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,ಮನೆ ಮನೆಯಲ್ಲಿ ಹಿಂದುತ್ವ ಮತ್ತು ಆರ್ಎಸ್ಎಸ್ ಬೆರೆತು ಹೋಗಿದೆ. ಪ್ರಿಯಾಂಕ್ ಖರ್ಗೆ ಇಂತಹ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅಶ್ವತ್ ನಾರಾಯಣ್ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸು ದಾಖಲು ಮಾಡಿದ್ದಾರೆ ಎಂದು ಚನ್ನಬಸಪ್ಪ ಕಿಡಿ ಕಾರಿದರು.

