ಸಿದ್ದು ಸಂಪುಟದ 24 ನೂತನ‌ ಸಚಿವರ  ಪ್ರಮಾಣ ಪ್ರಮಾಣ‌ ವಚನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ‌ 24 ನೂತನ ಸಚಿವರು ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಹಿರಿಯ ರಾಜಕಾರಣಿ, ಗದಗ ಶಾಸಕ ಹೆಚ್.ಕೆ ಪಾಟೀಲ್,ನಾಗಮಂಗಲ ಶಾಸಕ ಎನ್​​. ಚಲುವರಾಯಸ್ವಾಮಿ ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್,ಬಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಬ್ಯಾಟರಾಯನಪುರ ಶಾಸಕ ಕೃಷ್ಣಬೈರೇಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಟಿ.ನರಸೀಪುರ ಶಾಸಕ, ಹಿರಿಯ ರಾಜಕಾರಣಿ ಡಾ.ಹೆಚ್​. ಸಿ.ಮಹದೇವಪ್ಪ ಅವರು ಸತ್ಯ ಮತ್ತು ನಿಷ್ಠೆ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಮಧುಗಿರಿ ಶಾಸಕ ಕೆಎನ್ ರಾಜಣ್ಣ ಅವರು ಬುದ್ಧ, ಬಸವ, ಅಂಬೇಡ್ಕರ್​ ಮತ್ತು ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಗಾಂಧಿ ನಗರ ಶಾಸಕ ದಿನೇಶ್ ಗುಂಡೂರಾವ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್​​ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ​​ಪ್ರಮಾಣವಚನ ಸ್ವೀಕರಿಸಿದರು.

ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಸೇಡಂ ಶಾಸಕ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಭಟ್ಕಳ ಶಾಸಕ ಮಂಕಾಳು ವೈದ್ಯ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಇವರು ಇದೇ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.

ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್​ ಅವರು ಇಂಗ್ಲಿಷ್​​ನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಹಿರಿಯೂರು ಶಾಸಕ ಡಿ.ಸುಧಾಕರ್ ಅವರು ತೇರು ಮಲ್ಲೇಶ್ವರ್ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಕಲಘಟಗಿ ಶಾಸಕ ಸಂತೋಷ್ ಲಾಡ್​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಶಾಸಕರೂ ಅಲ್ಲದ, ಎಂಎಲ್ ಸಿಯೂ ಅಲ್ಲದ ಎನ್​. ಎಸ್​​.ಬೋಸರಾಜು ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್​​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.