ರೈಲು ದುರಂತ:ತುರ್ತು‌ ಸಭೆ ನಡೆಸಿ ಮಾಹಿತಿ ಪಡೆದ ಮೋದಿ

ನವದೆಹಲಿ: ಒಡಿಶಾದ ಬಾಲಸೋರ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ತುರ್ತು ಸಭೆ ನಡೆಸಿದ ಪ್ರಧಾನಿ ಮೋದಿಯವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಪಡೆಯ ಮುಖ್ಯಸ್ಥರು, ರೈಲ್ವೇ ಸಚಿವಾಲಯ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಭಾರತದಲ್ಲಿ ನಡೆದ ನಾಲ್ಕನೇ ಮಹಾ ರೈಲು ಅಪಘಾತ ಇದಾಗಿದೆ.

ಪ್ರಧಾನಿ ಮೋದಿ ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ ಗಾಯಾಳುಗಳು ದಾಖಲಾಗಿರುವ ಕಟಕ್‌ ನಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಕೋರಮಂಡಲ್‌ ಎಕ್ಸ್‌ಪ್ರೆಸ್‌, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 261 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.