ಅಕ್ರಮ ಮರಳು ದಂಧೆ ತಡೆಯಲು ಹೋದ ಕಾನ್ಸ್ ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ

ಕಲಬುರಗಿ: ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ದಂದೆ ಕೋರರು ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ ಹೇಯ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಈ ಘಟನೆ ನಡೆದಿದ್ದು, ​ಮೈಸೂರ್ ಚೌಹಾಣ್ ​(51) ಹತ್ಯೆಯಾಗಿರುವ ಹೆಡ್​​ ಕಾನ್​ಸ್ಟೇಬಲ್.

ಅಕ್ರಮ ಮರಳು ಸಾಗಣೆ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಮೈಸೂರ್ ಚೌಹಾಣ್ ತಪಾಸಣೆಗೆ ಬೈಕ್ ನಲ್ಲಿ ಹೋಗಿದ್ದರು.

ಆಗ ದುಷ್ಕರ್ಮಿಗಳು ಮೈಸೂರ್​​ ಚೌಹಾಣ್​ ಮೇಲೆ ಟ್ರ್ಯಾಕ್ಟರ್ ಹರಿಸಿದ್ದು,ಟ್ರ್ಯಾಕ್ಟರ್​ ಚಕ್ರಕ್ಕೆ ಸಿಲುಕಿ‌ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೈಸೂರ್ ಚೌಹಾನ್ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪೂರ್ ತಾಂಡಾ ನಿವಾಸಿ.

ನೆಲೋಗಿ ಠಾಣೆಯಲ್ಲಿ ಹೆಡ್ ಕಾನ್​​​ ಸ್ಟೇಬಲ್​​ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಒಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.