ಬೆಂಗಳೂರು: ನಾವು ಚುನಾವಣೆಗೂ ಮೊದಲು ಪ್ರಣಾಳಿಕೆಯನ್ನು ಘೋಷಿಸಿದ್ದೆವು. ಪಕ್ಷದ ಪ್ರಣಾಳಿಕೆಯಲ್ಲಿ ಹಲವು ಯೋಜನೆಗಳನ್ನೂ ಪ್ರಸ್ತಾಪಿಸಿದ್ದೆವು. ಆದರೆ ಈಗ ಯೋಜನೆಗಳ ಜಾರಿ ಕಷ್ಟವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ
ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಚಾವುಂಡರಾಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಏನೇ ಕಷ್ಟವಾದರೂ ನುಡಿದಂತೆ ನಡೆದುಕೊಳ್ಳುತ್ತೇವೆ. ಗ್ಯಾರಂಟಿಗಳನ್ನು ಜಾರಿಗೊಳಿಸಿಯೇ ತೀರುತ್ತೇವೆ. ಈ ವಿಚಾರದಲ್ಲಿ ಪಲಾಯನ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.