ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಖಂಡನೆ: ರೈತರಿಂದ ಆಹೋರಾತ್ರಿ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ರೈತರು ಸಂಕಷ್ಟದಲ್ಲಿದ್ದಾರೆ,ಕುಡಿಯುವ ನೀರಿಗೂ ಸಂಕಷ್ಟ ಇರುವಾಗಲೇ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ರಾಜ್ಯದಲ್ಲಿ ಬರದ ಛಾಯೆ  ಆವರಿಸಿದೆ. ಕುಡಿಯುವ ನೀರಿಗೂ ಸಂಕಷ್ಟ ತಲೆದೂರುವ ಪರಿಸ್ಥಿತಿ ಉಂಟಾಗಿದೆ.ಹೀಗಿದ್ದರೂ ಸಹ  ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ದ ರೈತರು ಸಿಡಿದೆದ್ದಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯಲ್ಲಿ ವಿವಿಧೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಆರ್ ಎಸ್ ಜಲಾಶಯದ ಬಳಿ ರೈತರು ಅಹೋರಾತ್ರಿ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ಮಂಡ್ಯದ ವಿಶ್ವೇಶ್ವರಯ್ಯ  ಪ್ರತಿಮೆ ಬಳಿ ಅರೆಬೆತ್ತಲೆ ಪ್ರತಿಭಟನೆ ನಡೆಯುತ್ತಿದ್ದು, ರೈತ ಮತ್ತು ಕನ್ನಡಪರ ವಿವಿಧ ಸಂಘಟನೆಗಳು ಸಾಥ್ ನೀಡಿವೆ. 

ನಮ್ಮಲ್ಲೇ ಸರಿಯಾಗಿ ಮಳೆಯಾಗದೇ ಕೃಷಿ ಮತ್ತು ಕುಡಿಯಲು ನೀರಿಗೆ ತೊಂದರೆ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಗೂ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.