ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬುಧವಾರ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದರು.
ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.
ಅಧಿಕಾರ ಸ್ವೀಕಾರ ಬಳಿಕ ತಂದೆ ಬಿ.ಎಸ್ ಯಡಿಯೂರಪ್ಪಅವರ ಕಾಲಿಗೆ ವಿಜಯೇಂದ್ರ ನಮಸ್ಕರಿಸಿ ಆಶೀರ್ವಾದ ಪಡೆದರು.
ನಂತರ ಹಿರಿಯ ನಾಯಕರು ವಿಜಯೇಂದ್ರ ಅವರಿಗೆ ಹಸ್ತಲಾಘವ ನೀಡಿ ಶುಭ ಕೋರಿದರು.

