ಬೆಂಗಳೂರು: ಕಾನೂನನ್ನ ಕೈಗೆತ್ತಿಕೊಳ್ಳುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲದಕ್ಕೂ ಇತಿ ಮಿತಿ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕರವೇ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕನ್ನಡ ಪರ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಸಾರ್ವಜನಿಕರ ಆಸ್ತಿ-ಪಾಸ್ತಿಗಳನ್ನ ಹಾಳು ಮಾಡುವುದು ತಪ್ಪು, ಯಾರ ಆಸ್ತಿಯನ್ನೂ ನಾಶ ಮಾಡಬಾರದು ಎಂದು ತಿಳಿಸಿದರು.
ನಾವು ಕನ್ನಡಿಗರೇ ಪ್ರತಿಭಟನೆ ಮಾಡಿ ಅಂತ ನಾನೇ ಹೇಳ್ತೀನಿ. ಪ್ರಜಾಪ್ರಭುತ್ವದಲ್ಲಿ ಅವರು ಏನು ಬೇಕಾದರೂ ಮಾಡಲಿ. ಬೇರೆ ಕಡೆಯಿಂದ ಬಂದು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ತಿಳಿ ಹೇಳೋಣ, ಆದರೆ ಅವರನ್ನ ಬೆದರಿಸೋದು ಸರಿಯಲ್ಲಾ ಎಂದು ಡಿಸಿಎಂ ಹೇಳಿದರು.
ನಾರಾಯಣ ಗೌಡ ಅವರು ಬೇಕಿದ್ದರೆ ಬಂದು ನನ್ನ ಮನೆ ಮುಂದೆ ಪ್ರತಿಭಟನೆ ಮಾಡಲಿ,ಆದರೆ ಕಾನೂನು ಕೈಗೆತ್ತಿಕೊಳ್ಳುವುದು ತಪ್ಪು ಎಂದರು.
ಸಿಎಂ ಕೂಡ ಸಚಿವರಿಗೆ ಕನ್ನಡದಲ್ಲಿಯೇ ಟಿಪ್ಪಣಿ ಬರಿಯೋದಕ್ಕೆ ಹೇಳಿದ್ದಾರೆ. ನಾವು ಕನ್ನಡಿಗರೇ, ಅವರ ಬೇಡಿಕೆ ಅನುಷ್ಠಾನಕ್ಕೆ ತರಲು ಸಮಯ ಬೇಕು ಎಂದು ಹೇಳಿದರು.
ಲೋಕಸಭಾ ಚುನಾವಣಾಯಲ್ಲಿ ತಕ್ಕ ಪಾಠ ಕಳಿಸುತ್ತೇವೆ ಎಂದಿದ್ದಾರಲ್ಲಾ ಎಂಬ ಪ್ರಶ್ನೆಗೆ ನಾವು ತಪ್ಪು ಮಾಡಲು ಬಿಡುವುದಿಲ್ಲ, ಅವರು ಕಾನೂನಿನ ಅಡಿಯಲ್ಲಿ ಹೋರಾಟ ಮಾಡಲಿ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

