ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್‌ ಸೋಲಿಗೆ ಕಾರಣ: ಅಶೋಕ್

ಬೆಂಗಳೂರು: ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯುಮುನಾ ನದಿ ಮೇಲೆ
ಅರವಿಂದ್‌ ಕೇಜ್ರಿವಾಲ್‌ ಕಳಂಕ ಹಾಕಿದ್ದೇ ಆಪ್ ಸೋಲಿಗೆ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್‌,ಕೇಜರಿವಾಲ್ ಅವರು ಜೈಲಿನಲ್ಲಿದ್ದುಕೊಂಡು 2 ತಿಂಗಳು ಆಡಳಿತ ಸ್ಥಗಿತಗೊಳಿಸಿದ್ದರು, ಯುಮುನಾ ನದಿ ಮೇಲೆ ಕಳಂಕ ಹಾಕಿದರು,ಇದರ ಶಾಪ ತಟ್ಟಿದೆ,ಹಾಗಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ತಿಳಿಸಿದರು.

ಅವರ ಐಶಾರಾಮಿ ಆಡಳಿತ ನೋಡಿ ಜನ ಬೇಸತ್ತಿದ್ದಾರೆ, ಯಮುನಾ ನದಿ ಒಂದು ದಿನಕ್ಕೆ ಮಲಿನ ಆಗಿಲ್ಲ. ದೆಹಲಿ ಜನ ಪ್ರತಿದಿನ ಕುಡಿಯುತ್ತಿದ್ದ, ಗಂಗೆ ಅಂತ ಪೂಜೆ ಮಾಡುವ ನೀರಿನ ಮೇಲೆಯೇ ಕಳಂಕ ತಂದರು. ಸ್ವಚ್ಛತೆ ಮಾಡುವ ಕೆಲಸ ನದಿಯದ್ದಲ್ಲ. ಕೇಜ್ರಿವಾಲ್‌ ಸರಿಯಾಗಿ ನಿರ್ವಹಣೆ ಮಾಡದೇ ನದಿ ಮೇಲೆ ಆಪಾದನೆ ಮಾಡಿದರು. ಇದೇ ಅವರ ಸೋಲಿಗೆ ಕಾರಣ ಎಂದು ತಿಳಿಸಿದರು.

ಸಿಎಂ ಜೈಲಿಗೆ ಹೋದಾಗ ರಾಜೀನಾಮೆ ಕೊಟ್ಟು ಅವರದ್ದೇ ಪಕ್ಷದ ಮತ್ತೊಬ್ಬರಿಗೆ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕಿತ್ತು. ಆದರೆ ಕೇಜರಿವಾಲ್ 2 ತಿಂಗಳು ಜೈಲಿನಲ್ಲಿದ್ದುಕೊಂಡು ಆಡಳಿತ ಸ್ಥಗಿತಗೊಳಿಸಿದ್ರು, ಅದರ ಶಾಪ ತಟ್ಟಿದೆ, ಜೊತೆಗೆ ಕಾಂಗ್ರೆಸ್‌ ನೇತೃತ್ವದ ಇಂಡಿ ಒಕ್ಕೂಟವೇ ಕೇಜ್ರಿವಾಲ್‌ ದೊಡ್ಡ ಕಳ್ಳ, ಭ್ರಷ್ಟಾಚಾರಿ ಎಂದು ಹೇಳಿದಾಗ ಜನರಿಗೆ ಅರ್ಥವಾಗಿದೆ, ಜೊತೆಗೆ ಪ್ರಧಾನಿ ಮೋದಿ ಅವರ ಆಡಳಿತ ವೈಖರಿ ಬಿಜೆಪಿ ಗೆಲುವಿಗೆ ಕಾರಣ ಎಂದು ಅಶೋಕ್‌ ಹೇಳಿದರು.

ಮೋದಿ ಜನಕ್ಕೋಸ್ಕರ ಕೆಲಸ ಮಾಡಿದರೆ ಸೋನಿಯಾ, ರಾಹುಲ್‌, ಪ್ರಿಯಾಂಕ ತಮ್ಮ ಕುಟುಂಬಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಗಿದೆ ಆದ್ದರಿಂದಲೇ ಜನ ಮೋದಿ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ದೆಹಲಿಯಲ್ಲಿ ಅಧಿಕಾರ ಕೊಟ್ಟಿದ್ದಾರೆ ಅದಕ್ಕಾಗಿ ದೆಹಲಿ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಶೋಕ್ ತಿಳಿಸಿದರು.