ಬೆಂಗಳೂರು: ಉದಯಗಿರಿ ಗಲಭೆ ಪ್ರಕರಣ ಸಂಬಂಧ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲು ಹೈಕೋರ್ಟ್ ಷರತ್ತು ಬದ್ಧ ಅನುಮತಿ ನೀಡಿದೆ.
ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದನ್ನ ಪ್ರಶ್ನಿಸಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಬಿಜೆಪಿ ಪ್ರತಿಭಟನೆಗೆ ಅನುಮತಿಸಿದೆ.
ಮೈಸೂರಿನ ಪುಟ್ ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಸಮ್ಮತಿ ನೀಡಿದ್ದು, ಧರಣಿಯಲ್ಲಿ 300ಕ್ಕಿಂತ ಹೆಚ್ಚು ಜನ ಭಾಗವಹಿಸುವಂತಿಲ್ಲ. ಧರಣಿ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡಬಾರದು. 1 ಲಕ್ಷ ರೂ. ಬಾಂಡ್ ನೀಡಲು ಆಯೋಜಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಪ್ರತಿಭಟನೆ ವೇಳೆ ಅಹಿಕರ ಘಟನೆ ನಡೆದರೇ ಅರ್ಜಿದಾರರೇ ಹೊಣೆ ಎಂದು ನ್ಯಾಯಾಲಯ ಸೂಚಿಸಿದೆ.
ಮಧ್ಯಾಹ್ನ 3.30ರಿಂದ ಪ್ರತಿಭಟನೆಗೆ ಅವಕಾಶ ನೀಡಿದ್ದು, ಪ್ರತಿಭಟನೆ ಶಾಂತಿಯುತವಾಗಿರಬೇಕು. ವಿಡಿಯೋ ಮಾಡಿಬೇಕು ಎಂದು ಮೈಸೂರು ಪೊಲೀಸ್ ಆಯುಕ್ತರಿಗ ಹೈಕೋರ್ಟ್ ನಿರ್ದೇಶನ ನೀಡಿದೆ.

