ಬೆಂಗಳೂರು: ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಮಾರ್ಚ್ 15ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದ್ದು,ಇದೇ ನ್ಯಾಯಾಲಯ ದಲ್ಲೇ ವಿಚಾರಣೆ ನಡೆಯಲಿದೆ.
ಬಿ.ಎಸ್ ಯಡಿಯೂರಪ್ಪ ಮತ್ತು ಇತರೆ ಆರೋಪಿ ಗಳಿಗೆ ಸಮನ್ಸ್ ನೀಡಿದೆ. ಸಹ ಆರೋಪಿ ಗಳಾದ ವೈ.ಎಂ ಅರುಣ, ರುದ್ರೇಶ ,ಮರುಳಸಿದ್ದಯ್ಯ ಜಿ.ಮರಿಸ್ವಾಮಿಗೂ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಹೊರಡಿಸಿದೆ.
ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಗೆ ಹೈಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು.

