ಕೊಲೆ ಕೇಸ್‌ನಲ್ಲಿ ಆಪ್ತ ಅರೆಸ್ಟ್: ಮಹಾರಾಷ್ಟ್ರ ಸಚಿವ ರಾಜೀನಾಮೆ

ಮುಂಬೈ : ಕೊಲೆ ಪ್ರಕರಣವೊಂದರಲ್ಲಿ ಆಪ್ತನ ಬಂಧನವಾಗುತ್ತಿದ್ದಂತೆ ಮಹಾರಾಷ್ಟ್ರ ಸಚಿವ ಧನಂಜಯ್‌ ಮುಂಡೆ ರಾಜೀನಾಮೆ ನೀಡಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಬೀಡ್ ಜಿಲ್ಲೆಯಲ್ಲಿ ಸರ್ಪಂಚ್‌ ಒಬ್ಬರ ಭೀಕರ ಹತ್ಯೆಯಾಗಿತ್ತು. ಮಸ್ಸಾಜೋಗ್ ಗ್ರಾಮದ ಸರ್ಪಂಚ್‌ ಸಂತೋಷ್ ದೇಶಮುಖ್ ಅವರ ಹತ್ಯೆಯಲ್ಲಿ ಪಾತ್ರ ವಹಿಸಿದ್ದ ಆರೋಪದ ಮೇಲೆ ಸಚಿವ ಧನಂಜಯ್‌ ಆಪ್ತ ವಾಲ್ಮಿಕ್ ಕರಡ್ ಅವರನ್ನು ಬಂಧಿಸಲಾಗಿತ್ತು.

ಆಹಾರ ಮತ್ತು ನಾಗರಿಕ ಸರಬರಾಜು ಖಾತೆಗಳನ್ನು ಹೊಂದಿದ್ದ ಧನಂಜಯ್ ಮುಂಡೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ.