ಬಜೆಟ್‌ ಹೈಲೈಟ್ಸ್‌

ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ.

ಅಂಗನವಾಡಿ ಕಾರ್ಯಕರ್ತೆಯರಗೆ 1 ಸಾವಿರ ರೂ.,

ಸಹಾಯಕಿಯರಿಗೆ 750 ರೂ. ಗೌರವಧನ ಹೆಚ್ಚಳ

ಮಲ್ಟಿಫ್ಲೆಕ್ಸ್​ಗಳಲ್ಲಿ ಏಕರೂಪ ದರ 200 ರೂ. ನಿಗಧಿ.

ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಾಪನೆ.

ಮುಸ್ಲಿಂ ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ

ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ನಿರ್ಧಾರ.

ಸಣ್ಣ ನೀರಾವರಿ ಯೋಜನೆಗೆ 2 ಸಾವಿರ ಕೋಟಿ ರೂ.

ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತ ಏರಿಕೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆ ಕಾಲಮಿತಿಯೊಳಗೆ ಪೂರ್ಣ.

ದೇವಾಲಯಗಳ ಛತ್ರಗಳಲ್ಲಿ ರೂಮ್​ ಬುಕಿಂಗ್​ಗೆ ವ್ಯವಸ್ಥೆ.

ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು ಕ್ರಮ.

ಮೇಕೆದಾಟು ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮ.

ರೇಷ್ಮೆ ಬೆಳೆ ವಿಸ್ತರಿಸಲು 55 ಕೋಟಿ ರೂ. ಅನುದಾನ.

ನಿವಾರಣೆಗೆ ಅನುಗ್ರಹ ಯೋಜನೆ ಜಾರಿ.

100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡ ನಿರ್ಮಾಣ.

500 ಹೊಸ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ

1,080 ಕೋಟಿ ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ

ಎತ್ತಿನಹೊಳೆ ಯೋಜನೆಗೆ 553 ಕೋಟಿ ರೂ.

ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ.

ನೋಂದಾಯಿತ ಕಾರ್ಮಿಕರಿಗೆ ಶೈಕ್ಷಣಿಕ, ವೈದ್ಯಕೀಯ ಸೌಲಭ್ಯಕ್ಕೆ ನೀಡುತ್ತಿರುವ ಸಹಾಯಧನ ದ್ವಿಗುಣ

ರಾಜ್ಯ ವಿಮಾ ಆಸ್ಪತ್ರೆ(ಇಎಸ್​) ಮೂಲಸೌಲಭ್ಯ ಹೆಚ್ಚಳಕ್ಕೆ 51 ಕೋಟಿ ರೂ.

ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂ. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 250 ಕೋಟಿ ರೂ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿ ವೇತನ 30 ಲಕ್ಷಕ್ಕೆ ಏರಿಕೆ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ನಿರ್ಧಾರ.

ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ 10 ಕೋಟಿ ರೂ.

ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಗುರಿ ನಿಗಧಿ.

ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗೆ 62,033 ಕೋಟಿ ರೂ.

ವಕ್ಫ್ ಆಸ್ತಿ ದುರಸ್ತಿ, ನವೀಕರಣ ಮತ್ತು ಮುಸ್ಲಿಂ ಸ್ಮಶಾನ ರಕ್ಷಣೆಗೆ 150 ಕೋಟಿ ರೂ.

ಶಿಕ್ಷಣ ಇಲಾಖೆಗೆ 45, 286 ಕೋಟಿ ರೂ.

ಇಂಧನಗೆ 26, 896 ಕೋಟಿ ರೂ.

ನೀರಾವರಿಗೆ 22,181 ಕೋಟಿ ರೂ.

ಆರೋಗ್ಯಕ್ಕಾಗಿ 17, 473 ಕೋಟಿ ರೂ.

ಕಂದಾಯ ಇಲಾಖೆಗೆ 17, 201 ಕೋಟಿ ರೂ.

ಸಮಾಜ ಕಲ್ಯಾಣ ಇಲಾಖೆಗೆ 16, 955 ಕೋಟಿ ರೂ.

ಗ್ಯಾರಂಟಿಗೆ 51,034 ಕೋಟಿ ರೂ‌. ಅನುದಾನ

ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಗೆ ಸಹಾಯ ಧನ

ಸರ್ಕಾರಿಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನೂ 2 ಸಾವಿರ ರೂ. ಹೆಚ್ಚಳ.

ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ.

ಮತ್ತು ಉತ್ಪಾದನಾ ವಲಯದ ಅಭಿವೃದ್ಧಿಗೆ ಬದ್ಧ

ಮೈಸೂರಿನ ಬನ್ನಿಮಂಟಪದಲ್ಲಿ ಹೈಟೆಕ್‌ ಬಸ್‌ ನಿಲ್ದಾಣಕ್ಕೆ 120 ಕೋಟಿ ರೂ.

ಬೆಂಗಳೂರಿನಲ್ಲಿ ಇವಿ ಕ್ಲಸ್ಟರ್‌ಗೆ 25 ಕೋಟಿ

ಮೈಸೂರಲ್ಲಿ ವಿಶ್ವದರ್ಜೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ

ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ

ನಕ್ಸಲ್ ನಿಗ್ರಹ ಪಡೆ ವಿಸರ್ಜನೆ

ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ

ಮಂಗಳೂರು, ಉಡುಪಿ ಕ್ರೀಡಾಂಗಣ ಮೇಲ್ದರ್ಜೆಗೆ

ಮೈಸೂರು ಮತ್ತು ಕಲಬುರಗಿಯಲ್ಲಿ ನಿಮ್ಹಾನ್ಸ್‌ ಮಾದರಿ ಸಂಸ್ಥೆ ಸ್ಥಾಪನೆ.