ಮೈಸೂರು: ನನ್ನ ಸಾವಿಗೆ ಎಸಿಎಫ್ ಮೇಡಮ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಅರಣ್ಯ ವೀಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಸರಗೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು,ಮೇಲಾಧಿಕಾರಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಅರಣ್ಯ ವೀಕ್ಷಕ ಪಿ.ಸುರೇಶ್ (34) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಸಿಎಫ್ ಅಮೃತ ಮಾಯಪ್ಪನವರ್ ವಿರುದ್ಧ ಆರೋಪ ಕೇಳಿ ಬಂದಿದೆ ಸುರೇಶ್, ಗುಂಡ್ಲುಪೇಟೆ ತಾಲೂಕು ಬೆರಂಬಾಡಿ ಗ್ರಾಮದ ನಿವಾಸಿಯಾಗಿದ್ದು, ಅರಣ್ಯ ಸಿಬ್ಬಂದಿಗೆ ನೀಡಿದ ಕ್ವಾರ್ಟರ್ಸ್ ನಲ್ಲಿಯೇ ಸಾವನ್ನಪ್ಪಿದ್ದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಸುರೇಶ್ ಸಾವಿಗೆ ಎಸಿಎಫ್ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸರಗೂರು ಪೊಲೀಸ್ ಠಾಣೆಯಲ್ಲಿ ಹೊಟ್ಟೆನೋವು ತಾಳಲಾರದೇ ಸಾವು ಎಂದು ಪ್ರಕರಣ ದಾಖಲಾಗಿದೆ.
ಡೆತ್ ನೋಟ್ ಇದ್ದರೂ ಹೊಟ್ಟೆ ನೋವು ಎಂದು ಎಫ್ ಐ ಆರ್ನಲ್ಲಿ ಉಲ್ಲೇಖ ಮಾಡಿದ್ದು ಹಿರಿಯ ಅಧಿಕಾರಿಗಳ ರಕ್ಷಣೆಗೆ ಪೊಲೀಸ್ ಅಧಿಕಾರಿಗಳು ನಿಂತಿದ್ಸಾರೆ ಎಂದು ಸ್ಥಳೀಯರು ದೂರಿದ್ದಾರೆ.
ಸುರೇಶ್ ಸಾವಿಗೆ ನ್ಯಾಯ ಕೊಡಿಸಿ ಎಂದು ಕುಟುಂಬಸ್ಥರು, ಸ್ಥಳೀಯರು ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.