ಸಾಂಸ್ಕೃತಿಕ ನಗರಿಯಲ್ಲಿ ಯುವಕನ ಬರ್ಭರ ಹ*ತ್ಯೆ

ಮೈಸೂರು: ಮೈಸೂರಿನಲ್ಲಿ ಯುವಕನನ್ನು ಬರ್ಬರ ಕೊಲೆ ಮಾಡಲಾಗಿದ್ದು ಜನ ಬೆಚ್ಚಿಬಿದ್ದಿದ್ದಾರೆ.

ವರುಣ ಗ್ರಾಮದ ಹೊರವಲಯದ ಹೋಟೆಲ್ ಬಳಿ ಕೊಲೆ ನಡೆದಿದ್ದು, ಕಾರ್ತಿಕ್ ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಕಾರ್ತಿಕ್ ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕಾರ್ತಿಕ್ ನನ್ನು ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ತಡರಾತ್ರಿ ನಡೆದಿರುವ 5 ಜನರ ತಂಡದಿಂದ ಈ ದುಷ್ಕೃತ್ಯ ನಡೆದಿದ್ದು, ಕೊಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವರುಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ.

ಕೊಲೆಯಾದ ಕಾರ್ತಿಕ್ ರೌಡಿ ಶೀಟರ್ ಎಂದು ಪೊಲೀಸರು ತಿಳಿಸಿದ್ದಾರೆ.