ಮೈಸೂರು: ಮಾವಿನಕಾಯಿ ಕೊಯ್ಯುವ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲೇಶ್ ಕೊಲೆಯಾದ ದುರ್ದೈವಿ. ಆರೋಪಿ ಚೇತನ್ ಎಂಬಾತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಶಂಕಹಳ್ಳಿಯಲ್ಲಿನಕ ಜಮೀನಿನಲ್ಲಿ ಮಲ್ಲೇಶ್ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಜಮೀನು ವಿಚಾರದಲ್ಲಿ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿತ್ತು.
ಈ ವೇಳೆ ಮಲ್ಲೇಶ್ ಜಮೀನಿನಲ್ಲಿದ್ದ ಮಾವಿನ ಮರದಿಂದ ಕಾಯಿಗಳನ್ನ ಕೀಳಿಸುವಾಗ ಚೇತನ್ ಕ್ಯಾತೆ ತೆಗೆದಿದ್ದಾನೆ.ಆಗ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ.
ಚೇತನ್ ಜೊತೆ ಸರಿತಾ,ಪ್ರವೀಣ,ಪವನ್,
ಮಂಜುಳ, ಕರಿಗೌಡ ಸೇರಿ ಗಲಾಟೆ ಮಾಡಿದ್ದಾರೆ.ಈ ವೇಳೆ ಚೇತನ್ ತನ್ನ ಬಳಿ ಇದ್ದ ಚಾಕುವಿನಿಂದ ಮಲ್ಲೇಶ್ ಗೆ ಇರಿದು ಪರಾರಿಯಾಗಿದ್ದ,ಆದರೆ ಕೆಲವೇ ಗಂಟೆಗಳಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ರಕ್ತಸ್ರಾವದಿಂದ ನರಳುತ್ತಿದ್ದ ಮಲ್ಲೇಶ್ ರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಪೊಲೀಸರು ತನಿಖೆ ನಡೆಸುತ್ತಿದ್ದಾರೆ