ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಈಗ ಡಿಕೆ ಸಹೋದರರ ಕುತ್ತಿಗೆಗೂ ತಗಲಾಕೊಂಡಿದೆ.
ಯಂಗ್ ಇಂಡಿಯಾಗೆ ಡಿ.ಕೆ ಶಿವಕುಮಾರ್ ಮತ್ತು ಡಿ.ಕೆ ಸುರೇಶ್ 2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕೋರ್ಟ್ಗೆ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಸಿದೆ. ಹೆಚ್ಚುವರಿ ಜಾರ್ಜ್ಶೀಟ್ನಲ್ಲಿ ಡಿಕೆ ಬ್ರದರ್ಸ್ ಹೆಸರು ಉಲ್ಲೇಖವಾಗಿದೆ.
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ದೇಣಿಗೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ದೇಣಿಗೆ ನೀಡಲಾಗಿದೆ ಎಂದು ಇಡಿ ಆರೋಪಿಸಿದೆ.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು 142 ಕೋಟಿ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಇಡಿ ಈ ಮೊದಲು ಆರೋಪಿಸಿತ್ತು.
ಕ್ರಿಮಿನಲ್ ಪಿತೂರಿ ನಡೆಸಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ನ ಸಾವಿರಾರು ಕೋಟಿ ಮೌಲ್ಯದ ಆಸ್ತಿಯನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್ ಪಿತ್ರೊಡಾ, ಸುಮನ್ ದುಬೆ ಮತ್ತು ಇತರ ಕಾಂಗ್ರೆಸ್ ನಾಯಕರು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಯಂಗ್ ಇಂಡಿಯನ್ ಲಿಮಿಟೆಡ್ ಮೂಲಕ 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು ಕೇವಲ 50 ಲಕ್ಷ ರೂ.ಗೆ ಖರೀದಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಎಜೆಎಲ್ಗೆ ನೀಡಿದ್ದ 90.2 ಕೋಟಿ ರೂ. ಸಾಲವನ್ನು 9.02 ಕೋಟಿಯ ಈಕ್ವಿಟಿ ಷೇರುಗಳನ್ನಾಗಿ ಪರಿವರ್ತಿಸಿ ಯಂಗ್ ಇಂಡಿಯನ್ಗೆ ವರ್ಗಾಯಿಸಲಾಗಿದೆ ಎಂದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.