ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ-ಯದಯವೀರ್

ಮೈಸೂರು: ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ
ಎಂದು ರಾಜವಂಶಸ್ಥರೂ ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ ಎನ್ನುವುದು ಸಂಸ್ಕೃತ, ಪಾಕ ಎಂದರೆ ಸಿಹಿ ಎಂದರ್ಥ ಬರುತ್ತದೆ. ಪಾಕ್ ಎಂಬ ಪದ ಇದೆ ಎಂದುಕೊಂಡು ಅದನ್ನ ಬದಲಾಯಿಸುವುದು ಸರಿಯಲ್ಲ ಎಂದು ತಿಳಿಸಿದರು.

ಮೈಸೂರು ಪಾಕ್ ಗೆ ಎಷ್ಟೋ ವರ್ಷಗಳ ಇತಿಹಾಸ ಇದೆ. ಅದೇ ರೀತಿ ಮಾಡುತ್ತಾ ಹೋದರೆ ಎಷ್ಟೋ ಹೆಸರುಗಳನ್ನ ಬದಲಾಯಿಸಬೇಕಾಗುತ್ತದೆ. ಅದೆಲ್ಲ ಈಗ ಅಪ್ರಸ್ತುತ ಎಂದು ಹೇಳಿದರು.

ಮೈಸೂರು ಸ್ಯಾಂಡಲ್ ಸೋಪ್ ಗೆ ನಾನು ರಾಯಭಾರಿ ಆಗಲ್ಲ, ಅದರ ಬಗ್ಗೆ ನನಗೆ ಆಸಕ್ತಿನೂ ಇಲ್ಲ ಎಂದು ಯದುವೀರ್ ಸ್ಪಷ್ಟಪಡಿಸಿದರು.

ಎಂಎಸ್ ಡಿಎಲ್ ರಾಯಭಾರಿಯಾಗಿ ತಮನ್ನಾ ಅವರನ್ನ ನೇಮಕ ಮಾಡಲಾಗಿದೆ, ತಾವೇ ಎಂಎಸ್ ಡಿಎಲ್ ರಾಯಭಾರಿಯಾಗಬೇಕೆಂಬ ಆಗ್ರಹ ಕೇಳಿ ಬಂದಿದೆಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ,ನಾನು ರಾಯಭಾರಿ ಆಗಲ್ಲ, ನಾನು ಜನ ಸೇವಾ ಕ್ಷೇತ್ರದಲ್ಲಿದ್ದೇನೆ. ನಾನು ಅದಕ್ಕೆಲ್ಲ ಹೋಗಲ್ಲ. ನನ್ನ ಕೆಲಸವೇ ಬೇಕಾದಷ್ಟು ಇದೆ ಎಂದು ತಿಳಿಸಿದರು.

ಮೈಸೂರು ಸ್ಯಾಂಡಲ್ ಸೋಪಿಗೆ ಅದರದೇ ಆದ ಐತಿಹ್ಯವಿದೆ. ಅದಕ್ಕೆ ದೇಶಾದ್ಯಂತ ತನ್ನದೇ ಆದ ಮಾರುಕಟ್ಟೆ ಇದೆ. ದೇಶದ ಮಟ್ಟದಲ್ಲಿ ಪ್ರಸಿದ್ಧಿಯಾಗಿರುವ ಕನ್ನಡದ ಕಲಾವಿದರಿಂದ ಜಾಹೀರಾತು ಕೊಡಿಸಲಿ ಅನ್ಯ ಭಾಷಿಗ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಟ್ಟು ರಾಯಭಾರಿಯಾಗಿಸುವ ಅಗತ್ಯ ಇಲ್ಲ ಎಂದು ಯದುವೀರ್ ಹೇಳಿದರು.