ಮೈಸೂರು: ಮೈಸೂರಿನ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಸುತ್ತಿರುವ ನೂತನ ಪಾದಚಾರಿ ಸೇತುವೆ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಮೈಸೂರಿನ ರಾಷ್ಟ್ರೀಯ ಹೆದ್ದಾರಿ, ಕೆ.ಆರ್. ಮಿಲ್ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವುದು ಕಷ್ಟವಾಗುತ್ತಿತ್ತು. ಈ ಬಗ್ಗೆ ಜನರು ಕುಂದುಕೊರತೆ ಹೇಳಿಕೊಂಡಾಗ ಕೂಡಲೇ ಇದನ್ನು ನಿರ್ಮಿಸುವ ಕುರಿತು ಕ್ರಮ ಕೈಗೊಳ್ಳಲಾಯಿತು ಎಂದು ಹೇಳಿದರು.
ಕಾಮಗಾರಿ ಕೆಲಸ ತ್ವರಿತ ಗತಿಯಲ್ಲಿ ಸಾಗುತ್ತಿದೆ,ಹಾಗಾಗಿ ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಯದುವೀರ್ ತಿಳಿಸಿದರು.
ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲ ರೀತಿಯ ಕೆಲಸಗಳನ್ನು ಮಾಡಲಾಗುವುದು. ಅಭಿವೃದ್ಧಿಯ ಜೊತೆಗೆ ಜನೋಪಯೋಗಿ ಕೆಲಸಗಳಿಗೂ ಆದ್ಯತೆ ನೀಡಲಾಗುವುದು ಎಂದು ಯದುವೀರ್ ಒಡೆಯರ್ ಭರವಸೆ ನೀಡಿದರು.