ಆರ್ ಸಿ ಬಿ ವಿಜಯೋತ್ಸವ ಕಾಲ್ತುಳಿತ ಪ್ರಕರಣ: ನಾಲ್ವರು ಅರೆಸ್ಟ್

ಬೆಂಗಳೂರು: ಆರ್ ಸಿ ಬಿ‌ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ ಬೆನ್ನಲ್ಲೇ ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಆರ್ ಸಿ ಬಿ ಮಾರ್ಕೆಟಿಂಗ್ ಹೆಡ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ನಿಖಿಲ್ ಬಂಧಿತರು.

ಕೆಎಸ್‌ಸಿಎ ಪ್ರಮುಖರೆಲ್ಲಾ ರಾತೊರಾತ್ರಿ ಪರಾರಿಯಾಗಿದ್ದು, ಅವರ ಮನೆಗಳಿಗೂ ತೆರಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ, ತನಿಖೆಯನ್ನ ಸಿಐಡಿಗೆ ವಹಿಸಿದ್ದರು.

2 ಎಫ್‌ಐಆರ್ ಅನ್ನ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆ ಹಾಗೂ ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.