ಮಾರಕಾಸ್ತ್ರಗಳಿಂದ ಹೊಡೆದು ಮಹಿಳೆ ಕೊ*ಲೆ‌

(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)

ಚಾಮರಾಜನಗರ: ಚಾಮರಾಜನಗರದಲ್ಲಿ ಮಹಿಳೆಯೊಬ್ಬರನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,ಡೊಳ್ಳಿಪುರದ ಶುಭ(೩೮) ಅರಣ್ಯ ವ್ಯಾಪ್ತಿ ವಲಯದಲ್ಲಿನ ಜಮೀನೊಂದರಲ್ಲಿ ಕೊಲೆಯಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು.

ಜಮೀನಿನಲ್ಲಿ ಪತಿ, ಪತ್ನಿ ಹಾಗೂ ಅತ್ತೆ ಮೂವರು ಇದ್ದು ಮಾರಕಾಸ್ತ್ರದಲ್ಲಿ ಹೊಡೆದು ಸಾಯಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ‌.

ಸ್ಥಳಕ್ಕೆ ಎಸ್ಪಿ ಬಿ.ಟಿ.ಕವಿತಾ, ಎಎಸ್ಪಿ ಶಶಿದರ್,ಡಿ ವೈ ಎಸ್ ಪಿ ಹಾಗೂ ಠಾಣಾ ಇನ್ಸ್ ಪೆಕ್ಟರ್ ಭೇಟಿ ನೀಡಿ ಪರಿಶೀಲಿಸಿದರು.ಈ‌ ಸಂಬಂಧ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿಧ್ದಾರೆ.