ಮೈಸೂರು: ಮೂಡ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ ಎಂದು ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಭವಿಷ್ಯ ನುಡಿದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದಾರೆ, ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂದರ್ಭ ಬಂದೇ ಬರುತ್ತದೆ ಎಂದು ಹೇಳಿದರು.
ಈಗಾಗಲೇ ತನಿಖೆ ನಡೆಯುತ್ತಿದೆ, ತನಿಖೆಗೆ ಬೇಕಾದ ಪೂರಕ ಸಾಕ್ಷ್ಯಾಧಾರಗಳ ಒದಗಿಸಿದ್ದೇನೆ,ಸಾಕ್ಷ್ಯಾಧಾರ ನಾಶ ಮಾಡುವ ಕೆಲಸವನ್ನು ಪೋಲಿಸರಿಂದ ಮಾಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಸಿಎಂ ತಪ್ಪಿತಸ್ಥರೆಂದು 14 ನಿವೇಶನಗಳನ್ನು ಹಿಂದಿರುಗಿಸಿದಾಗಲೇ ಜನರಿಗೆ ಗೊತ್ತಾಗಿದೆ. ಕಾದು ನೋಡಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ತಿಳಿಸಿದರು.
ಮುಡಾ ಹಗರಣ ಪ್ರಕರಣ ಸಂಬಂಧ, ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ ಉದೇಶ್ ಕರ್ತವ್ಯ ಲೋಪ ಎಸಗುತ್ತಿದ್ದಾರೆ ಎಂದು ದೂರಿದರು.
ಮುಡಾ ಪ್ರಕರಣದ ತನಿಖೆಯನ್ನ ಪಾರದರ್ಶಕವಾಗಿ ಮಾಡುತ್ತಿಲ್ಲ, ಸಾಕ್ಷ್ಯಾಧಾರ ನಾಶಪಡಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಇವರೇ ಸಹಕರಿಸುತ್ತಿದ್ದಾರೆ,ಕೂಡಲೇ ಉದೇಶ್ ಅವರನ್ನ ವರ್ಗಾವಣೆ ಮಾಡಬೇಕು ಎಂದು ನಿನ್ನೆ ಕೋರ್ಟ್ ನಲ್ಲಿ ವಾದ ಮಂಡಿಸಿದ್ದೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.