ಬೆಂಗಳೂರು: ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಸ್ ಲಸಿಕೆಯಿಂದ ಹೃದಯಾಘಾತ ಎಂಬ ಆರೋಪ ಸರಿಯಲ್ಲ ಎಂದು ಹೇಳಿದರು.
ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ. ಮಧುಮೇಹ, ಕೊಬ್ಬು ಸೇರಿದಂತೆ ಅನೇಕ ಅಡ್ಡ ಪರಿಣಾಮಗಳು ಹೃದಯಾಘಾತಕ್ಕೆ ಕಾರಣ ಆಗಿವೆ. ರಕ್ತದೊತ್ತಡ, ಶುಗರ್, ಒಬೆಸಿಟಿ, ದೈಹಿಕ ಚಟುವಟಿಕೆ ಇಲ್ಲದೇ ಇರುವುದು ಹೃದಯಾಘಾತಕ್ಕೆ ಕಾರಣ ಆಗಿದೆ ಎಂದು ತಿಳಿಸಿದರು.
ಜನರ ಜೀವನ ಶೈಲಿ ಕೂಡ ಹೃದಯಾಘಾತಕ್ಕೆ ಕಾರಣ ಆಗಿದೆ. ಕೊವಿಡ್ ಲಸಿಕೆಯಿಂದ ನೇರವಾಗಿ ಕಾರಣ ಅಲ್ಲ ಎಂದು ದಿನೇಶ್ ಗುಂಡೂರಾವ್ ಪುನರುಚ್ಚರಿಸಿದರು.