ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುತ್ತೇವೆ ಎಂಬ ನೆಪವೊಡ್ಡಿ ಸಿಎಂ ಸಿದ್ದರಾಮಯ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ
ಯಾರ ಮನೆಯ ಬಾಗಿಲು ತಟ್ಟದೇ, ಸಾರ್ವಜನಿಕರನ್ನು ಮಾತನಾಡಿಸದೆ ಕೇವಲ ಸ್ಟಿಕ್ಕರ್ ಅಂಟಿಸಲು ಸೀಮಿತವಾಗಿರುವ ಸಮೀಕ್ಷೆಯಲ್ಲಿ ಈಗ ಸಿಟ್ಕರ್ ಮುದ್ರಣದಲ್ಲೂ ಲೂಟಿ ಹೊಡೆದ ಅಂಶ ಬೆಳಕಿಗೆ ಬಂದಿದೆ ಎಂದು ಅವರು ದೂರಿದ್ದಾರೆ.
ಬೇಕಾಬಿಟ್ಟಿಯಾಗಿ 87 ಲಕ್ಷ ರೂಪಾಯಿ ಮೌಲ್ಯದ ಸ್ಟಿಕ್ಕರ್ ಮುದ್ರಿಸಿ, ಈಗ 25 ಲಕ್ಷ ರೂಪಾಯಿ ಮೌಲ್ಯದ ಸ್ಟಿಕ್ಕರ್ ಗಳನ್ನು ಕಸದ ಬುಟ್ಟಿಗೆ ಎಸೆಯಲು ಹೊರಟಿರುವ
ಸರ್ಕಾರ, ಜನರ ತೆರಿಗೆ ಹಣವನ್ನು ಹಗಲು ದರೋಡೆ ಮಾಡುತ್ತಿದೆ ಎಂದು ಟ್ವೀಟ್ ಮಾಡಿ ಅಶೋಕ್ ಕಿಡಿಕಾರಿದ್ದಾರೆ.