ಬೆಂಗಳೂರು: ಸಾರಿಗೆ ಬಂದ್ ಮಾಡಿ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರ ಸಂಘಟನೆಗಳಿಗೆ ಸರ್ಕಾರ ಶಾಕ್ ನೀಡಿದೆ, ಪ್ರತಿಭಟನೆ ನಿಷೇಧಿಸಿ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ.
ಮುಷ್ಕರ ನಡೆಸದಂತೆ ಸಾರಿಗೆ ನೌಕರರಿಗೆ ವಾರ್ನ್ ಮಾಡಲಾಗಿದೆ.
ಆ.5 ರಂದು ಬಸ್ ನಿಲ್ಲಿಸಿ ಮುಷ್ಕರ ನಡೆಸಲು ಸಾರಿಗೆ ಸಂಘಟನೆಗಳು ಮುಂದಾಗಿದ್ದವು. ಜನಸಾಮಾನ್ಯರಿಗೆ ಸಾರಿಗೆ ಸೇವೆ ಓದಗಿಸುವುದು ಅಗತ್ಯವಾಗಿದೆ, ಈ ಹಿನ್ನೆಲೆಯಲ್ಲಿ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ರಡಿ ಎಸ್ಮಾ ಜಾರಿ ಮಾಡಲಾಗಿದೆ.
ಇಂದಿನಿಂದ 6 ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ.
ಜು.1 ರಿಂದ ಡಿ.31ರ ವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಕೆಎಸ್ಆರ್ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಲಾಗಿದೆ.
ಸರ್ಕಾರದ ಅಧಿಸೂಚನೆಯ ಪ್ರತಿಯನ್ನು ಎಲ್ಲಾ ಘಟಕ, ಕಾರ್ಯಾಗಾರ, ಕಚೇರಿ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸುವ ಮೂಲಕ ಈ ವಿಚಾರವನ್ನು ಎಲ್ಲಾ ನೌಕರರ ಗಮನಕ್ಕೆ ತರಲಾಗುವುದು ಎಂದು ಇಲಾಖೆ ತಿಳಿಸಿದೆ.