ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

ಮೈಸೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳನ್ನು ಪರಿಶೀಲಿಸಿದರು.

ಅಕ್ಕಿ,ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿ ಗಳಿಗೆ ತಲುಪಿಸಬೇಕು ಎಂದು ಸಚಿವರು ಸೂಚಿಸಿದರು.

ಸಗಟು ಮಳಿಗೆ ಗುಣಮಟ್ಟದ್ದಾಗಿದೆ ಉತ್ತಮವಾಗಿದೆ ಎಂದು ಸಿಬ್ಬಂದಿಯನ್ನು ಶ್ಲಾಘಿಸಿದ ಕೆ. ಹೆಚ್. ಮುನಿಯಪ್ಪ, ರಾಜ್ಯದ ಎಲ್ಲಾ ಸಗಟು ಮಳಿಗೆಗಳು ಇದೇ ರೀತಿ ಗುಣಮಟ್ಟವನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಗಟು ಮಳಿಗೆಯಲ್ಲಿ ಹಮಾಲಿ ಕೆಲಸಗಾರನ್ನು ಮಾತನಾಡಿಸಿದ ಸಚಿವರು ಅವರ ಸಮಸ್ಯೆಗಳನ್ನು ಆಲುಸಿದರು,ಯಾವುದೇ ಸಮಸ್ಯೆ ಇದ್ದರೂ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್,ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ, ಸಗಟು‌ಮಳಿಗೆಯ ಸಹಾಯ ನಿರ್ದೇಶಕ ಕಿರಣ್ ಹಾಗೂ ಅಧಿಕಾರಿಗಳು ಹಾಜರಿದ್ದರು.