ಉರುಳಿಬಿದ್ದ ಡಿಸಿಎಂ ಬೆಂಗಾವಲು ವಾಹನ

ಮಂಡ್ಯ: ಮೈಸೂರಿನಲ್ಲಿ ನಡೆಯುತ್ತಿದ್ದ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಬೆಂಗಾವಲು ವಾಹನ ಉರುಳಿ ಬಿದ್ದ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದ್ದು,ಬೆಂಗಾವಲು ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೈಸೂರಿನ ಸಾಧನಾ ಸಮಾವೇಶಕ್ಕೆ ತೆರಳಿದ್ದ ಡಿಕೆಶಿ ಬೆಂಗಳೂರಿಗೆ ವಾಪಸಾಗುತ್ತಿದ್ದರು. ಈ ವೇಳೆ ಡಿಕೆಶಿ ಬೆಂಗಾವಲು ವಾಹನ ಹೊಸೂರು ಬಳಿಯ ಎಕ್ಸ್‌ಪ್ರೆಸ್‌ವೇ ಬಳಿ ಡಿವೈಡರ್‌ಗೆ ಡಿಕ್ಕಿಯಾಗಿ ಉರುಳಿ ಬಿದ್ದಿದೆ.

ಗಾಯಾಳುಗಳನ್ನು ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ಸುಯೋಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅದೃಷ್ಟವಶಾತ್‌ ಬೆಂಗಾವಲು ವಾಹನದ ಹಿಂದೆಯೇ ಇದ್ದ ಡಿಕೆಶಿ ಕಾರಿಗೆ ಯಾವುದೇ ಅಪಾಯ ಆಗಿಲ್ಲ.