ಹುಬ್ಬಳ್ಳಿ: ಯಾರೋ ಎಸಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಎಂಬ ಯೋಚನೆ ಮಾಡಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್ ಹೊಸ ಬಾಂಬ್ ಸಿಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಈ ಬಗ್ಗೆ ಗಂಭೀರ ಆರೋಪ ಮಾಡಿರುವ ಅವರು, ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಅವರಿಗೆ ಫುಡ್ ಪಾಯಿಸನ್ ಆಗಿದೆ ಅಂತ ಗೊತ್ತಿತ್ತು,ಆದರೆ ಇದಕ್ಕೆ ಬೇರೆಯದೆ ಕಾರಣ ಇದೆ ಎಂದು ಹೇಳಿದ್ದಾರೆ
ಮಠದ ಹೊರಗಡೆ ಯಾರೊ ಇಬ್ಬರು ಯುವಕರು ನಿಂತು ಮಠಕ್ಕೆ ಯಾರು ಬರುತ್ತಾರೆ ಯಾರು ಹೋಗತ್ತಾರೆ ಎಂಬ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ ಜತೆಗೆ ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಅಂತ ಭಕ್ತರು ನನಗೆ ಹೇಳಿದ್ದಾರೆ. ಅದೇ ಯುವಕರು ಅಡುಗೆ ಮನೆಗೆ ಹೋಗಿದ್ದರು. ಈ ಬಗ್ಗೆ ಸ್ಥಳೀಯ ಭಕ್ತರು ಯುವಕರನ್ನು ವಿಚಾರಣೆ ಮಾಡಿದ್ದಾರೆ. ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೆ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ, ಶ್ರೀಗಳು ಈ ಬಗ್ಗೆ ನನ್ನ ಮುಂದೆ ಹೇಳಿಕೊಂಡಿದ್ದಾರೆ ಎಂದು ಬೆಲ್ಲದ್ ಮಾಹಿತಿ ಹಂಚಿಕೊಂಡಿದ್ದಾರೆ
ನನಗೆ ಮನಸ್ಸು ಸರಿಯಾಗುತ್ತಿಲ್ಲ, ನನಗೆ ವಿಷ ಪ್ರಾಶನ ಆಗಿದೆ ಅಂತ ಅನುಮಾನ ಇದೆ,
ಊಟದಲ್ಲಿ ಏನೋ ಹಾಕಲಾಗಿದೆ.ಯಾರೊ ಈ ಕೆಟ್ಟ ಕೆಲಸ ಮಾಡುತ್ತಿದ್ದಾರೆ,ಸಮಾಜ ನೋಡುತ್ತಿದೆ,ಅವರು ಮಾಡಿದ ಕೆಟ್ಟ ಕೆಲಸಕ್ಕೆ ತಕ್ಕ ಶಿಕ್ಷೆ ಸಮಾಜ ನೀಡುತ್ತದೆ ಎಂದು ಶ್ರೀಗಳು ನನಗೆ ತಿಳಿಸಿದ್ದಾರೆ ಎಂಬುದಾಗಿ ಅರವಿಂದ್ ಬೆಲ್ಲದ್ ತಿಳಿಸಿದ್ದಾರೆ.