ವಿಷ್ಣು ಪುಣ್ಯಭೂಮಿ ದ್ವಂಸ‌: ಮೈಸೂರಲ್ಲಿ ಅಭಿಮಾನಿಗಳ ಪ್ರತಿಭಟನೆ

ಮೈಸೂರು: ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ದಲ್ಲಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಪುಣ್ಯಭೂಮಿ ದ್ವಂಸ‌ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಡಾಕ್ಟರ್ ವಿಷ್ಣುವರ್ಧನ್ ಉದ್ಯಾನವನ ಮುಂಭಾಗ ಸಾಹಸಸಿಂಹ ವಿಷ್ಣು ವರ್ಧನ್ ಅಭಿಮಾನಿಗಳ ಒಕ್ಕೂಟ ವತಿಯಿಂದ ಬೆಂಗಳೂರಿನ ಅಭಿಮಾನಿ ಸ್ಟುಡಿಯೋದಲ್ಲಿರುವ ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯಭೂಮಿ ದ್ವಂಸ ಮಾಡಿರುವುದನ್ನು ಖಂಡಿಸಿ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಅಭಿಮಾನಿ ಬಳಗದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ ಅವರು, ಇಂದು ದೇಶಾದ್ಯಂತ ವರಮಹಾಲಕ್ಷ್ಮಿ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದಾರೆ ಆದರೆ ಇಂತಹ ಸಮಯದಲ್ಲಿ ವಿಷ್ಣು ಅಭಿಮಾನಿಗಳಿಗೆ ಕರಾಳ ದಿನ ವಾಗಿದೆ ಎಂದು ವಿಷಾದಿಸಿದರು.

ವಿಷ್ಣು ಅಭಿಮಾನಿಗಳಿಗೆ ವಿಷ್ಣುವಿನ ಸಾವು ಮತ್ತೊಮ್ಮೆ ನೆನಪಾಗುತ್ತಿದೆ, ವಿಷ್ಣು ವರ್ಧನ್ ಅವರ ಪುಣ್ಯಭೂಮಿಯನ್ನು ಧ್ವಂಸ ಮಾಡಿರುವುದು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ನೊಂದು ನುಡಿದರು.

ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಅಭಿಮಾನಿಗಳ ಸಭೆ ಕರೆದು ಇದರ ಬಗ್ಗೆ ಸ್ಪಷ್ಟೀಕರಣ ಕೊಡಬೇಕು ಹಾಗೂ ಅಭಿಮಾನಿಗಳಿಗೆ ನ್ಯಾಯ ದೊರಕಿಸಿಕೊಡ ಬೇಕೆಂದು ಎಂ. ಡಿ.ಪಾರ್ಥಸಾರತಿ ಮನವಿ ಮಾಡಿ ದರು.

ಪ್ರತಿಭಟನೆಯಲ್ಲಿ ಅಭಿಮಾನಿ ಬಳಗದ ಒಕ್ಕೂಟದ ಸದಸ್ಯರು, ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್,ಎಸ್ ಎನ್ ರಾಜೇಶ್, ವಿನಯ್ ಕಣಗಾಲ್, ಬೈರತಿ ಲಿಂಗರಾಜು, ಲೋಕೇಶ್, ಮಹಾನ್ ಶ್ರೇಯಸ್, ಬಸವರಾಜ್, ಸಂತೋಷ್, ಚಿನ್ನ ಬೆಳ್ಳಿ ಸಿದ್ದಪ್ಪ, ಮಹದೇವ್, ಸುಚೀಂದ್ರ, ಮಿರ್ಲೆ ಪನೀಶ್, ಹೊಸಮಠ, ಅಭಿ ಹಾಗೂ ಇನ್ನಿತರ ವಿಷ್ಣು ಅಭಿಮಾನಿಗಳು ಪಾಲ್ಗೊಂಡಿದ್ದರು.